Back To Top

 ರಾಸಲೀಲೆ..ಪ್ರಕರಣ : ಡಿವೈಎಸ್ಪಿ ರಾಮಚಂದ್ರಪ್ಪಗೆ ಜಾಮೀನು ಮಂಜೂರು.
January 20, 2025

ರಾಸಲೀಲೆ..ಪ್ರಕರಣ : ಡಿವೈಎಸ್ಪಿ ರಾಮಚಂದ್ರಪ್ಪಗೆ ಜಾಮೀನು ಮಂಜೂರು.

ಮಧುಗಿರಿ : ತಮ್ಮ ಕಚೇರಿಗೆ ದೂರು ನೀಡಲು ಬಂದಿದ್ದ ಮಹಿಳೆಯನ್ನು ಪುಸಲಾಯಿಸಿ ತನ್ನ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿರುವ ಮಧುಗಿರಿ ಡಿವೈಎಸ್ಪಿ ಎ. ರಾಮಚಂದ್ರಪ್ಪನವರಿಗೆ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಪಟ್ಟಣದ 4 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆ. ಯಾದವ ರವರು ಡಿವೈಎಸ್ಪಿ ರಾಮಚಂದ್ರಪ್ಪನವರಿಗೆ ಶರತ್ತು ಬದ್ದ ಜಾಮೀನು ಮಂಜೂರು ಮಾಡಿದ್ದಾರೆ.

ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪನವರು ಪಾವಗಡದಿಂದ ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಬಂದ ಮಹಿಳೆಯನ್ನು ತನ್ನ ಕಚೇರಿಯಲ್ಲಿನ ಏಕಾಂತ ಗೃಹ ಅಥವಾ ಶೌಚಾಲಯದಲ್ಲಿ ಕರೆದುಕೊಂಡು ಹೋಗಿದ್ದು ಅನೈತಿಕ ಚಟುವಟಿಕೆ ಆರಂಭಿಸಿದ್ದು, ಇದನ್ನು ಕೆಲವರು ಕಿಟಕಿಯ ಮೂಲಕ ಚಿತ್ರೀಕರಣ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಮಾದ್ಯಮಗಳಲ್ಲಿ ಸುದ್ದಿ ಪ್ರಕಟಗೊಂಡಿತ್ತು. ಡಿವೈಎಸ್ಪಿ ರಾಸಲೀಲೆ ಪ್ರಕರಣ ಮಾದ್ಯಮಗಳಲ್ಲಿ ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಮಾದ್ಯಮಗಳ ವರದಿ ಆಧರಿಸಿ ಎಸ್.ಪಿ ಕೆ.ವಿ ಅಶೋಕ್ ವರದಿ ನೀಡಿದ್ದರು. ಇವರ ವರದಿ ಆಧರಿಸಿ ರಾಜ್ಯ ಪೋಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅಮಾನತ್ತು ಮಾಡಿ ಆದೇಶಿಸಿದ್ದರು.

ಇದೇ ರೀತಿಯ ಇನ್ನೊಂದು ಪ್ರಕರಣದಲ್ಲಿ ಮತ್ತೋರ್ವ ಮಹಿಳೆ ದೂರು ನೀಡಿದ್ದು, ಈ ಪ್ರಕರಣ ಬಾಕಿ ಇದ್ದು,
ಸುಮಾರು 15 ದಿನಗಳಿಂದ ಕಾರಾಗೃಹದಲ್ಲಿದ್ದ ಆರೋಪಿಯು ಸದ್ಯಕ್ಕೆ ಜಾಮೀನಿನಿಂದ ಹೊರಬಂದಿದ್ದಾರೆ.

Prev Post

ಸೈಫ್ ಆಲಿ ಖಾನ್ ಮೇಲೆ ದಾಳಿ ನಡೆಸಿದ ಆರೋಪಿ ಬಂಧನ

Next Post

ಆನ್‌ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡು ಲಾಡ್ಜ್ ನಲ್ಲೇ ಆತ್ಮಹತ್ಯೆಗೆ ಶರಣಾದ ಯುವಕ

post-bars

Leave a Comment

Related post