ದೆಹಲಿಯಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮುಕರ್ತವ್ಯ ಪಥದಲ್ಲಿ ಸೇನಾ ಶಕ್ತಿ ಅನಾವರಣ
ನವದೆಹಲಿ: ದೇಶದಾದ್ಯಂತ ಗಣರಾಜ್ಯೋತ್ಸವ ಆಚರಿಸುತ್ತಿದ್ದು ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಬಾರಿಯ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಆಗಮಿಸಿದ್ದಾರೆ. ಧ್ವಜಾರೋಹಣ ಸಮಾರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಾಗೂ ಸೇನಾ ಮುಖ್ಯಸ್ಥರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಧ್ವಜಾರೋಹಣದ ಬಳಿಕ ರಾಷ್ಟ್ರಪತಿ ಮುರ್ಮು ಅವರು ಗೌರವ ವಂದನೆ ಸ್ವೀಕರಿಸಿದ್ದಾರೆ.
ಕರ್ತವ್ಯ ಪಥದಲ್ಲಿ ಈಗಾಗಲೇ ಪಥ ಸಂಚಲನ ಶುರುವಾಗಿದ್ದು, ಸೇನಾಪಡೆಗಳು ತಮ್ಮ ಶಕ್ತಿ ಪ್ರದರ್ಶನವನ್ನು ಮಾಡಲಿದೆ. 52 ಸದಸ್ಯರನ್ನು ಒಳಗೊಂಡಿರುವ ಇಂಡೋನೇಷಿಯಾದ ರಾಷ್ಟ್ರೀಯ ಸಶಸ್ತ್ರ ಪಡೆಗಳ ಮೆರವಣಿಗೆಯ ತುಕಡಿ ಮತ್ತು 190 ಸದಸ್ಯರೊಂದಿಗೆ ಇಂಡೋನೇಷ್ಯಾದ ಮಿಲಿಟರಿ ಅಕಾಡೆಮಿಯ ಬ್ಯಾಂಡ್ ಪರೇಡ್ನಲ್ಲಿ ಭಾಗವಹಿಸಿದೆ. ಭಾರತೀಯ ವಾಯು ಸೇನೆ ನೆರೆದಿದ್ದ ಗಣ್ಯರ ಮೇಲೆ ಪುಷ್ಪಾರ್ಚನೆ ಮಾಡಿದ್ದು. ಲೆಫ್ಟಿನೆಂಟ್ ಅಹಾನ್ ಕುಮಾರ್ ನೇತೃತ್ವದಲ್ಲಿ ಅಶ್ವದಳ ಪರೇಡ್ ನಡೆಸಲಾಯಿತು.
ಈ ಬಾರಿ 10 ಸಾವಿರ ಅತಿಥಿಗಳಿಗೆ ವಿಶೇಷವಾದ ಆಹ್ವಾನ ನೀಡಲಾಗಿದೆ. ಭಾರತದ ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರದರ್ಶಿಸಲು ಸ್ತಬ್ಧ ಚಿತ್ರಗಳ ಪ್ರದರ್ಶನ ನಡೆಯಲಿದೆ. ಕರ್ನಾಟಕದ ಲಕ್ಕುಂಡಿ ದೇವಾಲಯಗಳ ಸ್ತಬ್ಧ ಚಿತ್ರದ ಮೆರವಣಿಗೆ ನಡೆಯಲಿದೆ. ಈ ಬಾರಿ ಕರ್ತವ್ಯ ಪಥದಲ್ಲಿ 5,000 ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ನಾರಿ ಶಕ್ತಿ ಪ್ರತಿನಿಧಿಸುವ ಎಲ್ಲಾ ಮೂರು ಸೇವೆಗಳ ಅನುಭವಿ ಮಹಿಳಾ ಅಧಿಕಾರಿಗಳು ಪರೇಡ್ ನಡೆಸಲಿದ್ದಾರೆ.