ಪರಸ್ತ್ರಿಯೊಂದಿಗೆ ಪತಿ ಲವ್ವಿಡವ್ವಿ: ಮಗಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ
ಬೆಂಗಳೂರು: ಮಹಿಳೆಯೊಬ್ಬರು ತನ್ನ ಐದು ವರ್ಷದ ಮಗಳನ್ನು ಕೊಂದು ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿರುವ ಅಮಾನವೀಯ ಘಟನೆ ರಾಮಯ್ಯ ಲೇ ಔಟ್ ನಲ್ಲಿ ಸಂಭವಿಸಿದೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟು, ಡೆತ್ ನೋಟಲ್ಲಿ ಪತಿಯ ಅನೈತಿಕ ಸಂಬಂಧದ ಬಗ್ಗೆ ಉಲ್ಲೇಖಿಸಿದ್ದಾರೆ. ಇನ್ನು ಮತ್ತೋರ್ವ ಮಗ ಆಟವಾಡಲು ಆಚೆ ಹೋಗಿದ್ದರಿಂದ ಬಚಾವ್ ಆಗಿದ್ದಾನೆ.
ಮೃತ ಮಹಿಳೆ ಶ್ರುತಿ(33) ಆತ್ಮಹತ್ಯೆಯಾಗಿದ್ದು ಮೊದಲು ತನ್ನ ಐದು ವರ್ಷದ ಮಗಳು ರೋಷಿಣಿಯನ್ನು ಕೊಂದು ಬಳಿಕ ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಟವಾಡಲು ಹೊರಹೋಗಿದ್ದ ಪುತ್ರ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಇನ್ನು ಆತ್ಮಹತ್ಯೆಗೆ ಮುನ್ನ ಶ್ರುತಿ ಡೆತ್ ನೋಟ್ ಬರೆದಿಟ್ಟಿದ್ದು, ಡೆತ್ ನೋಟಲ್ಲಿ ಗಂಡ ಪರಸ್ತ್ರಿಯೊಂದಿಗಿನ ಅನೈತಿಕ ಸಂಬಂಧದ ಹೊಂದಿರುವ ಬಗ್ಗೆ ಉಲ್ಲೇಖಿಸಿದ್ದಾರೆ.
10 ವರ್ಷದ ಹಿಂದೆ ಶ್ರುತಿಗೆ ಚಾರ್ಟರ್ಡ್ ಅಕೌಂಟೆಂಟ್ ಜತೆ ಮದುವೆಯಾಗಿತ್ತು. ಅಲ್ಲದೇ ಶ್ರುತಿ ಗ್ರಾಮ ಪಂಚಾಯಿತಿ ಒಂದರ ಅಧ್ಯಕ್ಷೆಯಾಗಿದ್ದು, ಒಂದು ಹೆಣ್ಣು ಒಂದು ಗಂಡು ಮಗು ಸಹ ಇದೆ.
ಆದರೆ ಗಂಡನ ಅನೈತಿಕ ಸಂಬಂಧದಿಂದ ಮನನೊಂದು ಬೇಸತ್ತು ಶ್ರುತಿ, ಪುತ್ರಿ ರೋಹಿಣಿಯನ್ನು ಕೊಂದು ಬಳಿಕ ತಾನೂ ಸಹ ನೇಣಿಗೆ ಶರಣಾಗಿದ್ದಾರೆ. ಇನ್ನು ಗಂಡು ಮಗು ಆಟವಾಡಲು ಮನೆಬಿಟ್ಟು ಆಚೆ ಹೋಗಿದ್ದರಿಂದ ಬಚಾವ್ ಆಗಿದ್ದಾನೆ.
ಪ್ರಕರಣದ ಹಿನ್ನೆಲೆ ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು, ಬಾಗಲಗುಂಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತ ಶ್ರುತಿ ಗಂಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇನ್ನು ತಾಯಿ ಮಗಳ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಶೃತಿ (33) ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಮಗಳು ರೋಶಿಣಿಯನ್ನು (5) ಫ್ಯಾನ್ಗೆ ನೇಣು ಹಾಕಿ ಬಳಿಕ ಅದೇ ಫ್ಯಾನಿಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಂಡ ಗೋಪಾಲಕೃಷ್ಣನ ಅಕ್ರಮ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಶೃತಿ ಡೆತ್ ನೋಟ್ ಬರೆದಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದೆ. ಸ್ಥಳಕ್ಕೆ ಬಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಮುಗಿಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಪೊಲೀಸರು ಒಪ್ಪಿಸಿದ್ದಾರೆ. ಸದ್ಯ ಪತಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.