Back To Top

 ಪ್ರವಾಸಕ್ಕೆ ಬಂದ ವೈದ್ಯ ವಿದ್ಯಾರ್ಥಿನಿ ದುರಂತ ಅಂತ್ಯ: ಮೂವತ್ತು ಗಂಟೆಗಳ ಬಳಿಕ ಶವ ಪತ್ತೆ
March 2, 2025

ಪ್ರವಾಸಕ್ಕೆ ಬಂದ ವೈದ್ಯ ವಿದ್ಯಾರ್ಥಿನಿ ದುರಂತ ಅಂತ್ಯ: ಮೂವತ್ತು ಗಂಟೆಗಳ ಬಳಿಕ ಶವ ಪತ್ತೆ

ಪ್ರತಿಭಾವಂತ ಭರತನಾಟ್ಯ ಕಲಾವಿದೆ. ಎಂಬಿಬಿಎಸ್ ಓದಿದ್ದ ಆಕೆಗೆ ಎಂಡಿ ಮಾಡುವ ಆಸೆಯಿತ್ತು. ಹೀಗಾಗಿ ಅದಕ್ಕಾಗಿ ತಯಾರಿ ಕೂಡ ನಡೆಸಿದ್ದಳು. ಆದರೆ ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಾಗ ತುಂಗಭದ್ರಾ ನದಿ ಪಾಲಾಗಿದ್ದಾಳೆ.

ಹೈದರಾಬಾದ್‌: ವೈದ್ಯ ವಿದ್ಯಾರ್ಥಿನಿ ತುಂಗಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ನಿನ್ನೆ ನದಿಯಲ್ಲಿ ಈಜಲು ಹೋಗಿದ್ದಾಗ ನೀರುಪಾಲಾಗಿದ್ದಾಳೆ. ವಿವಿಧ ತಂಡಗಳಿಂದ ಮೂವತ್ತು ಗಂಟೆಗಳ ಕಾರ್ಯಾಚರಣೆ ನಂತರ ಇಂದು ಶವ ಪತ್ತೆ ಆಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರ ಬಳಿ ನಿನ್ನೆ ಘಟನೆ ನಡೆದಿದೆ.
ಆಕೆ ಪ್ರತಿಭಾವಂತ ಭರತನಾಟ್ಯ ಕಲಾವಿದೆ. ಎಂಬಿಬಿಎಸ್ ಓದಿದ್ದ ಆಕೆಗೆ ಎಂಡಿ ಮಾಡುವ ಆಸೆಯಿತ್ತು. ಹೀಗಾಗಿ ಅದಕ್ಕಾಗಿ ತಯಾರಿ ಕೂಡ ನಡೆಸಿದ್ದಳು. ಆದರೆ ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಾಗ ತುಂಗಭದ್ರಾ ನದಿ ಪಾಲಾಗಿದ್ದಾಳೆ. ಹೈದ್ರಾಬಾದಿನ ಪ್ರಭಾವಿ ಶಾಸಕ ಮತ್ತು ಮಾಜಿ ಶಾಸಕರ ಸಂಬಂಧಿಯೂ ಆಗಿರುವ ವೈದ್ಯ ವಿದ್ಯಾರ್ಥಿನಿ ಇದೀಗ ನದಿಯಲ್ಲಿ ಶವವಾಗಿ ಪತ್ತೆ ಆಗಿದ್ದಾಳೆ.

ಸಾಣಾಪುರ ಬಳಿಯಿರುವ ತುಂಗಭದ್ರಾ ನದಿಯಲ್ಲಿ ಹೈದ್ರಾಬಾದ್ ಮೂಲದ ಇಪ್ಪತ್ತೇಳು ವರ್ಷದ ವೈದ್ಯೆ ಅನನ್ಯಾ ರಾವ್ ನೀರು ಪಾಲಾಗಿದ್ದಳು. ಮೂರು ದಿನದ ಹಿಂದೆ ಹಂಪಿಗೆ ಪ್ರವಾಸ್ಕಕೆ ಬಂದಿದ್ದ ಅನನ್ಯಾ ರಾವ್, ನಿನ್ನೆ ಮುಂಜಾನೆ ಅಂಜನಾದ್ರಿಗೆ ಹೋಗಲು ಸಿದ್ದವಾಗಿದ್ದಳು. ಆದರೆ ಅದಕ್ಕೂ ಮೊದಲೇ ತುಂಗಭದ್ರಾ ನದಿ ಬಳಿ ಹೋಗಿ, ಅಲ್ಲಿನ ಪ್ರಕೃತಿ ಸೌಂದರ್ಯ ನೋಡಿಕೊಂಡು ಬರಲು ಹೋಗಿದ್ದರು. ಹರಿಯುತ್ತಿರುವ ನದಿಯನ್ನು ನೋಡುತ್ತಿದ್ದಂತೆ, ಈಜು ಬರ್ತಿದ್ದ ಅನನ್ಯಾ ರಾವ್ ನದಿಯಲ್ಲಿ ಈಜುವ ಮನಸ್ಸು ಆಗಿದೆ. ಆದರೆ ವಿಧಿಯ ಲೆಕ್ಕಾಚಾರ ಬೇರೆಯೇ ಆಗಿತ್ತು.

ಇದನ್ನು ಓದಿ:

https://infomindz.in/parikseyalli-kpsc-kannada-kagole-sidideda-karave-narayanagowda-freedom-parknalli-bruhat-pratibatane/
Prev Post

ಕಚೇರಿಯಲ್ಲೇ ಬೆಡ್ ರೂಂ ಮಾಡಿದ ಕಾರವಾರದ ಪ್ರವಾಸೋದ್ಯಮ ಅಧಿಕಾರಿ ಅಮಾನತು

Next Post

ಭಾರತೀಯ ವಾಯುಪಡೆಗೆ ಭಾರೀ ಬ್ರಹ್ಮಾಸ್ತ್ರ

post-bars

Leave a Comment

Related post