ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಕರ್ನಾಟಕ ಮುಂಗಡ ಪತ್ರ ಮಂಡನೆ ಆರಂಭಿಸಿದ್ದಾರೆ. ಸಿದ್ದರಾಮಯ್ಯ ಅವರ ದಾಖಲೆ 16ನೇ ಬಜೆಟಿನಲ್ಲಿ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಆಯವ್ಯಯ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಜೆಟ್ ಅನ್ನು “ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ಕರ್ನಾಟಕ ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ” ಎಂದು ಹೇಳಿಕೊಂಡಿದ್ದಾರೆ.
2025-26ನೇ ಸಾಲಿನ ಕರ್ನಾಟಕ ಬಜೆಟ್ ಇಂದು ಮಂಡನೆಯಾಗುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆ 16ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಇದೆ.
ಕರ್ನಾಟಕ ರಾಜ್ಯದ ಜನರು ಮತ್ತು ಶಾಸಕರು ವಿಶೇಷ ಅನುದಾನದ ನಿರೀಕ್ಷೆಯಲ್ಲಿದ್ದಾರೆ. ಗ್ಯಾರಂಟಿಗೆ ಹಣಕಾಸು ಪರಿಸ್ಥಿತಿ ಸರಿದೂಗಿಸಲು ವಿಶೇಷ ಆದ್ಯತೆ ನೀಡುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಸಂಪುಟ ಸಭೆ ಸಭೆಯಲ್ಲಿ ಬಜೆಟ್ಗೆ ಅನುಮೋದನೆ ಪಡೆದಿದ್ದಾರೆ. ಬಳಿಕ, ಸಿಎಂ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೆ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಕಾಲುನೋವಿನಿಂದ ಬಳಲುತ್ತಿರುವ ಸಿದ್ದರಾಮಯ್ಯ ಅವರು ಕುಳಿತೇ ಬಜೆಟ್ ಮಂಡಿಸುತ್ತಿದ್ದಾರೆ. ಈಬಾರಿಯ ಮುಂಗಡ ಪತ್ರ ಮಂಡನೆಯಲ್ಲಿ ರಾಜ್ಯದ ಅಭಿವೃದ್ಧಿಗೆ ಒತ್ತು ನೀಡುತ್ತಾರಾ ಕಾದುನೋಡಬೇಕಿದೆ. ಐದು ಗ್ಯಾರೆಂಟಿ ಯೋಜನೆಗಳಿಗೆ ಈ ಹಿಂದೆಯೇ ಸುಮಾರು 52 ಸಾವಿರ ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, ಈ ಬಜೆಟ್ನಲ್ಲಿ ಹೊಸ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಗಳಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ತಮ್ಮ ದಾಖಲೆ 16ನೇ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದರು. ಬರೊಬ್ಬರಿ 3 ಗಂಟೆ 30 ನಿಮಿಷ ಮುಂಗಡ ಪತ್ರ ಓದಿದರು. ಈ ಬಾರಿಯ ಬಜೆಟ್ನಲ್ಲಿ ಗ್ಯಾರೆಂಟಿಗೆ 51 ಸಾವಿರ ಕೋಟಿ ರೂ. ಮೀಸಲು ಇಡಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸರ್ಕಾರದಿಂದ ಹಲವು ನೆರವು ನೀಡಲಾಗುವುದು. ಬಾದಾಮಿಯಲ್ಲಿ ಚಾಲುಕ್ಯ ಉತ್ಸವದಲ್ಲಿ ನೃತ್ಯೋತ್ಸವ ಕಾರ್ಯಕ್ರಮ ಆಯೋಜನೆಗೆ 2 ಕೋಟಿ ರೂ. ಅನುದಾನ ನೀಡಲಾಗುವುದು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬೊಳುವಾರು ಮೊಹಮ್ಮದ್ ಕುಂಞಿ ಅವರ ‘ಸ್ವಾತಂತ್ರ್ಯದ ಓಟ’ ಕಾದಂಬರಿ ನಾಟಕಕ್ಕೆ ರೂಪಾಂತರಿಸಿ, ಪ್ರದರ್ಶಿಸಲು 1 ಕೋಟಿ ರೂ. ಮೀಸಲು ಇಡಲಾಗುವುದು ಕನ್ನಡ ಭಾರತಿ ಪುಸ್ತಕ ಮಾಲಿಕೆಯಡಿ ವಿವಿಧ ಕ್ಷೇತ್ರಗಳ ಸಾಧಕರನ್ನು ಪರಿಚಯಿಸುವ ಪುಸ್ತಕ ಪ್ರಕಟಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರತಿಭಾನ್ವಿತ 60 ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ
ಯುವಸಬಲೀಕರಣ ಮತ್ತು ಕ್ರೀಡೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಗುರಿ-ಒಲಿಂಪಿಕ್ ಪದಕ ಯೋಜನೆಯಡಿ ಒಲಿಂಪಿಕ್ಸ್-2028 ತಯಾರಿಗಾಗಿ ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ರೂ. ಪ್ರೋತ್ಸಾಹ ಧನ ವಿತರಣೆ ಮಾಡಲಾಗುವುದು. ಈ ವರ್ಷಕ್ಕೆ 6 ಕೋಟಿ ರೂ. ನೆರವು ನೀಡಲಾಗುವುದು.
ತಲಾ 2 ಕೋಟಿ ರೂ. ವೆಚ್ಚದಲ್ಲಿ 12 ತಾಲೂಕು ಕೇಂದ್ರಗಳಲ್ಲಿ ಕ್ರೀಡಾಂಗಣಗಳ ನಿರ್ಮಾಣ ಮಾಡಲಾಗುವುದು. ಈ ಕಾಮಗಾರಿಗಳಿಗೆ 12 ಕೋಟಿ ರೂ. ಹಂಚಿಕೆ ಮಾಡಲಾಗುವುದು. ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದು ಜಿಲ್ಲಾ ಕ್ರೀಡಾಂಗಣದಲ್ಲಿ ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ಶೂಟಿಂಗ್ ರೇಂಜ್ ನಿರ್ಮಾಣ ಮಾಡಲಾಗುವುದು. ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹ ಹಾಗೂ ಬುಡಕಟ್ಟು ಜನಾಂಗದವರಿಗೆ ಕ್ರೀಡಾಕೂಟ ಆಯೋಜನೆಗೆ 2 ಕೋಟಿ ರೂ. ಅನುದಾನ ನೀಡಲಾಗುವುದು. ಕೂಡಿಗೆ ಕ್ರೀಡಾ ಶಾಲೆಯ ಸೌಲಭ್ಯಗಳ ಉನ್ನತೀಕರಣಕ್ಕೆ 3 ಕೋಟಿ ಅನುದಾನ ನೀಡಲಾಗುವುದು. ಯಾದಗಿರಿಯ ಶಹಾಪುರದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಕ್ರೀಡಾ ವಸತಿ ಶಾಲೆ ಪ್ರಾರಂಭ ಮಾಡಲಾಗುವುದು.
ಸಿಎಂ ಸಿದ್ದರಾಮಯ್ಯ ಕೆಲವೇ ಹೊತ್ತಿನಲ್ಲಿ ಆಯವ್ಯಯ ಮಂಡಿಸಲಿದ್ದಾರೆ. ದಾಖಲೆ 16ನೇ ಬಾರಿಗೆ ಬಜೆಟ್ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೋಲಾರದ ಅಭಿಮಾನಿ ಪ್ರಸನ್ನಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಕಾವೇರಿ ನಿವಾಸ ಬಳಿ ಅಭಿಮಾನಿ ಪ್ರಸನ್ನಕುಮಾರ್ ಶುಭಾಶಯ ಕೋರಿ ಪೋಸ್ಟರ್ ಪ್ರದರ್ಶಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗ್ಗೆ 10.15ಕ್ಕೆ 2025-26ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಎರಡನೇ ಅವಧಿಯ ಮೂರನೇ ಬಜೆಟ್ ಇದಾಗಿದೆ. ಈ ಬಜೆಟ್ ಮೇಲೆ ಹಲವು ನಿರೀಕ್ಷೆಗಳಿದ್ದು, ಮೇಕೆದಾಟು ಯೋಜನೆಗಿರುವ ಅಡೆತಡೆ ನಿವಾರಣೆಗೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.