Back To Top

 ನದಿ ತೀರದಲ್ಲಿ ಶಾಂಪೂ, ಸೋಪು ಮಾರಾಟ ನಿಷೇಧ: ಪುಣ್ಯ ಕ್ಷೇತ್ರ ಸ್ವಚ್ಚತೆ ಕಾಪಾಡಲು ಅರಣ್ಯ ಸಚಿವರ ಸೂಚನೆ
March 12, 2025

ನದಿ ತೀರದಲ್ಲಿ ಶಾಂಪೂ, ಸೋಪು ಮಾರಾಟ ನಿಷೇಧ: ಪುಣ್ಯ ಕ್ಷೇತ್ರ ಸ್ವಚ್ಚತೆ ಕಾಪಾಡಲು ಅರಣ್ಯ ಸಚಿವರ ಸೂಚನೆ

ಬೆಂಗಳೂರು: ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಶಾಂಪೂ ಹಾಗೂ ಸೋಪುಗಳ ಮಾರಾಟ ಮತ್ತು ಬಳಕೆ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ.

ನದಿ ತೀರದಲ್ಲಿ ಸೋಪು, ಶಾಂಪೂ ಬಳಕೆ ಹೆಚ್ಚಾಗಿದ್ದು, ಸ್ನಾನ ಮಾಡಿದ ನಂತರ ಭಕ್ತಾದಿಗಳು ಅರ್ಧಂಬರ್ಧ ಖಾಲಿಯಾದ ಸೋಪುಗಳನ್ನು ಕವರ್‌ ಗಳಲ್ಲಿ ಹಾಕಿ ನದಿಯಲ್ಲೇ ಬಿಡುತ್ತಿದ್ದರು. ಇದರಿಂದ ನದಿ ನೀರಿನಲ್ಲಿ ಮಾಲಿನ್ಯ ಹೆಚ್ಚಾಗುತ್ತಿದೆ. ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆ ಈ ಕ್ರಮ ಕೈಗೊಂಡಿದೆ.

ನದಿ ದಡಗಳಲ್ಲಿ ಸೋಪು ಹಾಗೂ ಶಾಂಪೂ ಮಾರಾಟ ಮಾಡದಂತೆ ನಿಷೇಧ ಹೇರಲಾಗಿದೆ. ಭಕ್ತರು ತಮ್ಮ ವಸ್ತುಗಳನ್ನು ನದಿಗಳಲ್ಲಿ ವಿಸರ್ಜಿಸದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ.

Prev Post

ವಾಮಾಚಾರ ಮಾಡಿ, ದೇವಾಲಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Next Post

ನೇತ್ರಾವತಿ ಪೀಕ್ ಕೆಳಭಾಗದಲ್ಲಿ ಕಾಳ್ಗಿಚ್ಚು| ನೂರಾರು ಎಕ್ರೆ ಅರಣ್ಯ ನಾಶ: ಆತಂಕ

post-bars

Leave a Comment

Related post