ನೇತ್ರಾವತಿ ಪೀಕ್ ಕೆಳಭಾಗದಲ್ಲಿ ಕಾಳ್ಗಿಚ್ಚು| ನೂರಾರು ಎಕ್ರೆ ಅರಣ್ಯ ನಾಶ: ಆತಂಕ
ಬೆಳ್ತಂಗಡಿ: ಕುದುರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ ಪೀಕ್ ಕೆಳಭಾಗದಲ್ಲಿ ಸಾವಿರಾರು ಎಕ್ರೆ ಪ್ರದೇಶಕ್ಕೆ ಕಾಡ್ಗಿಚ್ಚು ಹಬ್ಬಿದ್ದು ಕಳೆದ ಎರಡು ದಿನಗಳಿಂದ ಅರಣ್ಯ ನಿರಂತರವಾಗಿ ಬೆಂಕಿಗೆ ಆಹುತಿಯಾಗುತ್ತಿದೆ.
ಕಡಿದಾದ ಪ್ರದೇಶಕ್ಕೆ ತೆರಳಲು ಸಾಧ್ಯವಾಗದೇ ಇರುವುದರಿಂದ ಬೆಂಕಿ ಕೆನ್ನಾಲಿಗೆ ಸುಮಾರು 50 ಕಿ.ಮೀ.ದೂರದ ಬೆಳ್ತಂಗಡಿ ವರೆಗೆ ನೇರವಾಗಿ ಗೋಚರಿಸುತ್ತಿದೆ.
ವನ್ಯಜೀವಿ ವಿಭಾಗದ ಸಾಕಷ್ಟು ಮರಗಿಡ, ಹುಲ್ಲು, ಪ್ರಾಣಿಗಳು ಬಲಿಯಾಗಿರುವ ಆತಂಕ ಎದುರಾಗಿದೆ.
ಎರಡು ದಿನಗಳಿಂದ ನಿರಂತರವಾಗಿ ಬೆಂಕಿ ಉರಿಯುತ್ತಿದ್ದು ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ.
ಸಾಕಷ್ಟು ಮೌಲ್ಯದ ಮರಗಳು, ಸಸ್ಯ ಸಂಪತ್ತು, ಪ್ರಾಣಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.