ರಸ್ತೆ ಕಾಮಗಾರಿ ವೇಳೆ ದುರಂತ: ಲೈಟ್ ಕಂಬ ಬಿದ್ದು ಇಬ್ಬರು ಮಹಿಳೆಯರು ಸಾವು
ಬೈಯ್ಯಪನಹಳ್ಳಿ ಬಳಿಯ ಸದ್ದುಗುಂಟೆಪಾಳ್ಯದಲ್ಲಿ ರಸ್ತೆ ಕಾಮಗಾರಿ ವೇಳೆ ದುರಂತ ಸಂಭವಿಸಿ, ಲೈಟ್ ಕಂಬ ಬಿದ್ದು ಇಬ್ಬರು ಮಹಿಳೆಯರು ಸ್ಧಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ.
ಬೆಂಗಳೂರು: ಬೈಯ್ಯಪನಹಳ್ಳಿ ಬಳಿಯ ಸದ್ದುಗುಂಟೆಪಾಳ್ಯದಲ್ಲಿ ರಸ್ತೆ ಕಾಮಗಾರಿ ವೇಳೆ ದುರಂತ ಸಂಭವಿಸಿ, ಲೈಟ್ ಕಂಬ ಬಿದ್ದು ಇಬ್ಬರು ಮಹಿಳೆಯರು ಸ್ಧಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ.

ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಜೆಸಿಬಿ ಲೈಟ್ ಕಂಬಕ್ಕೆ ತಗುಲಿ ಕಂಬ ಬಿದ್ದಿದೆ. ಈ ವೇಳೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಕಂಬ ಬಿದ್ದಿದೆ. ಲೈಟ್ ಕಂಬ ಏಕಾಏಕಿ ಬಿದ್ದಿದ್ದರಿಂದ ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಕೂಡಲೇ ಬೈಯ್ಯಪನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇದನ್ನು ಓದಿ: