ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ರಥೋತ್ಸವದ ವೇಳೆ ಉರುಳಿದ ತೇರಿನ ಮೇಲ್ಭಾಗ: ತಪ್ಪಿದ ಅನಾಹುತ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ರಥೋತ್ಸವದ ವೇಳೆ ತೇರಿನ ಮೇಲ್ಭಾಗ ಏಕಾಏಕಿ ಕುಸಿದು ಬಿದ್ದಿದೆ. ಇದರ ಪರಿಣಾಮ ಭಕ್ತರಲ್ಲಿ ಆತಂಕದ ವಾತಾವರಣ ಉಂಟಾಗಿದೆ. ಆದರೆ ಅದೃಷ್ಟವಶಾತ್ ಯಾವುದೇ ವ್ಯಕ್ತಿಗೂ ಗಂಭೀರ ಗಾಯಗಳಾಗಿಲ್ಲ.
ಪ್ರತಿ ವರ್ಷ ಅದ್ಧೂರಿಯಾಗಿ ಆಚರಿಸಲಾಗುವ ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರಿ ದೇವಳದ ರಥೋತ್ಸವಕ್ಕೆ ಈ ಬಾರಿಯೂ ಸಹ ಸಾವಿರಾರು ಭಕ್ತರು ಭಾಗಿಯಾಗಿದ್ದರು. ದೇವಸ್ಥಾನದಲ್ಲಿ ನಡೆದ ಜಾತ್ರಾ ಕಾರ್ಯಕ್ರಮದ ಹಿನ್ನಲೆಯಲ್ಲಿ ಭಕ್ತರು ದೇವಿಯನ್ನು ದರ್ಶನ ಮಾಡಲು ಹರಿದುಬಂದಿದ್ದರು. ಈ ಉತ್ಸವದ ಸಂದರ್ಭದಲ್ಲಿ ತೇರು ರಾತ್ರಿ ಸುಮಾರು 1.40 ರಿಂದ 2.00 ಗಂಟೆ ವೇಳೆಗೆ ತೇರಿನ ಮೇಲ್ಭಾಗವು ಕುಸಿದ ಘಟನೆ ನಡೆದಿದೆ.
ಅವಘಡ ಸಂಭವಿಸಿದ ವೇಳೆ ಅರ್ಚಕರು ತೇರಿನಲ್ಲೇ ಇದ್ದರೂ, ಅವರಿಗೆ ಯಾವುದೇ ಗಾಯಗಳಾಗಿಲ್ಲ. ಇದು ದೇವಿಯ ಕೃಪೆ ಎಂದು ಭಕ್ತರು.