Back To Top

 ಪಹಲ್ಗಾಮ್‌ ದಾಳಿ: ಮೊದಲ ಬಾರಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಪ್ರತಿಕ್ರಿಯೆ

ಪಹಲ್ಗಾಮ್‌ ದಾಳಿ: ಮೊದಲ ಬಾರಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಪ್ರತಿಕ್ರಿಯೆ

ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ನಲ್ಲಿ 25 ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆ ಸೇರಿದಂತೆ 26 ಜನರನ್ನು ಬಲಿತೆಗೆದುಕೊಂಡ ಉಗ್ರರ ದಾಳಿ ಬಗ್ಗೆ ಇದೇ ಮೊದಲ ಬಾರಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಶನಿವಾರ ಪ್ರತಿಕ್ರಿಯೆ ನೀಡಿದ್ದಾರೆ. ಘಟನೆ ಸಂಬಂಧ ಯಾವುದೇ ತಟಸ್ಥ, ಪಾರದರ್ಶಕ ಮತ್ತು ವಿಶ್ವಾಸಾರ್ಹ ತನಿಖೆಗೆ ಪಾಕಿಸ್ತಾನ ಮುಕ್ತವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ನಲ್ಲಿ 25 ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆ ಸೇರಿದಂತೆ 26 ಜನರನ್ನು ಬಲಿತೆಗೆದುಕೊಂಡ ಉಗ್ರರ ದಾಳಿ ಬಗ್ಗೆ ಇದೇ ಮೊದಲ ಬಾರಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಶನಿವಾರ ಪ್ರತಿಕ್ರಿಯೆ ನೀಡಿದ್ದಾರೆ. ಘಟನೆ ಸಂಬಂಧ ಯಾವುದೇ ತಟಸ್ಥ, ಪಾರದರ್ಶಕ ಮತ್ತು ವಿಶ್ವಾಸಾರ್ಹ ತನಿಖೆಗೆ ಪಾಕಿಸ್ತಾನ ಮುಕ್ತವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಅಮಾಯಕರನ್ನು ಬಲಿ ತೆಗೆದುಕೊಂಡ ಬರೋಬ್ಬರಿ 5 ದಿನಗಳ ಬಳಿಕ ಬಂದ ಮೊದಲ ಪ್ರತಿಕ್ರಿಯೆ ಇದಾಗಿದೆ. ಭಯೋತ್ಪಾದಕ ದಾಳಿಗೆ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ತನಿಖೆಯ ವಿವರಗಳನ್ನು ಭಾರತ ಇನ್ನೂ ಜಗತ್ತಿಗೆ ತೋರಿಸದಿರುವಾಗ ಇಸ್ಲಾಮಾಬಾದ್‌ನಿಂದ ಬಂದ ಮೊದಲ ಪ್ರತಿಕ್ರಿಯೆ ಇದಾಗಿದೆ.

ಕಾಕುಲ್‌ನಲ್ಲಿರುವ ಪಾಕಿಸ್ತಾನದ ಅಬೋಟಾಬಾದ್ ಬಳಿಯ ಮಿಲಿಟರಿ ಅಕಾಡೆಮಿಯಲ್ಲಿ ನಡೆದ ಪಾಸಿಂಗ್ ಔಟ್ ಪೆರೇಡ್‌ನಲ್ಲಿ ಭಾಷಣ ಮಾಡುತ್ತಾ ಮಾತನಾಡಿರುವ ಅಲ್ಲಿನ ಪ್ರಧಾನಿ ಷರೀಫ್, ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ದುರಂತವು ಭಾರತದ ನಿರಂತರ ಆರೋಪದ ಆಟಕ್ಕೆ ಮತ್ತೊಂದು ಉದಾಹರಣೆಯಾಗಿದೆ, ಇದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಮತ್ತು ಈಗ ಜವಾಬ್ದಾರಿಯುತ ದೇಶವಾಗಿ ತನ್ನ ಪಾತ್ರವನ್ನು ಮುಂದುವರೆಸುತ್ತಾ, ಪಾಕಿಸ್ತಾನವು ಯಾವುದೇ ತಟಸ್ಥ, ಪಾರದರ್ಶಕ ಮತ್ತು ವಿಶ್ವಾಸಾರ್ಹ ತನಿಖೆಯಲ್ಲಿ ಭಾಗವಹಿಸಲು ಮುಕ್ತವಾಗಿದೆ ಎಂದಿದ್ದಾರೆ. ಈ ಸಮಾರಂಭದಲ್ಲಿ ಹಿರಿಯ ಮಿಲಿಟರಿ ಅಧಿಕಾರಿಗಳು ಕೂಡ ಭಾಗವಹಿಸಿದ್ದರು ಮತ್ತು ಷರೀಫ್ ಈಗಾಗಲೇ ತಯಾರು ಮಾಡಿ ಬರೆದ ಭಾಷಣವನ್ನು ಓದುತ್ತಿರುವಂತೆ ಕಂಡುಬಂದಿತು.

ಪೆಹಲ್ಗಾಮ್ ದಾಳಿಯ ನಂತರ, ಪಾಕಿಸ್ತಾನ ತನಿಖೆಯಲ್ಲಿ ಭಾಗವಹಿಸಲು ಮುಂದೆ ಬಂದಿದ್ದು ಇದೇ ಮೊದಲಲ್ಲ. ಪಠಾಣ್‌ಕೋಟ್ ದಾಳಿಯ ಸಂದರ್ಭದಲ್ಲಿಯೂ 2016ರಲ್ಲಿ ಪಾಕಿಸ್ತಾನದ ತನಿಖಾಧಿಕಾರಿಗಳ ತಂಡ ಪಠಾಣ್‌ಕೋಟ್ ವಾಯುನೆಲೆಗೆ ಭೇಟಿ ನೀಡಿತ್ತು. ಈ ಬಾರಿ ಕೂಡ ಪಾಕಿಸ್ತಾನ, ಇಸ್ಲಾಮಾಬಾದ್‌ನಲ್ಲಿರುವ ವಿದೇಶಿ ರಾಯಭಾರಿಗಳಿಗೆ ಮಾಹಿತಿ ನೀಡಿದ್ದು, ಸನ್ನಿವೇಶ ಉಲ್ಬಣಗೊಳ್ಳುವ ಬಗ್ಗೆ ತಮ್ಮ ಆತಂಕವನ್ನು ವ್ಯಕ್ತಪಡಿಸಿದೆ. ಹಿತ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಮೂಲಕ ದೃಢಪಡಿಸಲಾಗಿದೆ. ಭಾರತವು ಘಟನೆ ಬಳಿಕ ಹಲವು ತ್ವರಿತ ಚಟುವಟಿಕೆಗಳನ್ನು ಕೈಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು 13ಕ್ಕೂ ಹೆಚ್ಚು ವಿಶ್ವ ನಾಯಕರೊಂದಿಗೆ ದೂರವಾಣಿ ಮಾತುಕತೆಯನ್ನು ನಡೆಸಿದ್ದಾರೆ. ದೆಹಲಿಯಲ್ಲಿ 30ಕ್ಕೂ ಹೆಚ್ಚು ದೇಶಗಳ ರಾಯಭಾರಿಗಳು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಗಳಲ್ಲಿ, ಪಹಲ್ಗಾಮ್ ದಾಳಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ, ದಾಳಿಯ ಹಿಂದೆ ಪಾಕಿಸ್ತಾನದ ಭಾಗವಹಿಸುವಿಕೆಯ ಬಗ್ಗೆ ಸ್ಪಷ್ಟ ಪುರಾವೆಗಳನ್ನು ಚರ್ಚಿಸಲಾಗಿದೆ.

ಪಹಲ್ಗಾಮ್ ದಾಳಿಯಲ್ಲಿ ಪ್ರಮುಖ ಪಾತ್ರವಹಿಸಿದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಎಂಬ ಭಯೋತ್ಪಾದಕ ಗುಂಪಿನ “ಎಲೆಕ್ಟ್ರಾನಿಕ್ ಸಹಿ” ಪಾಕಿಸ್ತಾನದ ಕನಿಷ್ಠ ಎರಡು ಸ್ಥಳಗಳಲ್ಲಿ ಪತ್ತೆಯಾಗಿದೆ. ಇದು ಪಾಕಿಸ್ತಾನದ ನೇರ ಸಂಪರ್ಕವನ್ನು ತೋರಿಸುವ ಅತ್ಯಂತ ಪ್ರಮುಖ ಪುರಾವೆಯಾಗಿದೆ. ದಾಳಿಯಲ್ಲಿನ ಕೆಲ ಭಯೋತ್ಪಾದಕರ ಗುರುತು ಸಿಕ್ಕಿದ್ದು, ಉಗ್ರರು ಹಿಂದೆ ಪಾಕಿಸ್ತಾನದಲ್ಲಿ ಶಿಬಿರಗಳಲ್ಲಿ ತರಬೇತಿ ಪಡೆದು, ಕೆಲ ಸಮಯದ ಹಿಂದೆ ಭಾರತದ ಭೂಪ್ರದೇಶದಲ್ಲಿ ನುಸುಳಿದವರು ಎಂಬುದನ್ನು ಉನ್ನತ ಮಟ್ಟದ ತಂಡ ದೃಢಪಡಿಸಿದೆ.

ಇದನ್ನು ಓದಿ:

https://infomindz.in/dali-nadesidavarannu-swathanthra-horatagararannu-pack-upa-pradani/
Prev Post

ಆರ್‌ಸಿಬಿ-ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಹಣಾಹಣಿ: ಗ್ರಾಹಕರಿಗೆ ಉಚಿತ ಬಿಯರ್ ಘೋಷಿಸಿದ ಪಬ್ ಮಾಲೀಕ

Next Post

ಬೇಸಿಗೆ ಮಳೆ ನಾಳೆಯಿಂದ ಮತ್ತೆ ಆರಂಭ: ಹವಾಮಾನ ಇಲಾಖೆ ಮುನ್ಸೂಚನೆ

post-bars

Leave a Comment

Related post