ಡಿಜಿಟಲ್ ಪ್ಲಾಟ್ಫಾರ್ಮ್ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಭಾರತ
ನವದೆಹಲಿ: ಪೆಹಲ್ಗಾಂ ಉಗ್ರ ದಾಳಿ ಬಳಿಕ ಭಾರತ ಪ್ರತಿ ಕ್ಷೇತ್ರದ ಮೇಲೆ ಹದ್ದಿನ ಕಣ್ಣಿಟ್ಟಿದೆ. ಇಷ್ಟೇ ಅಲ್ಲ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಪೈಕಿ ಡಿಜಿಟಲ್ ಪ್ಲಾಟ್ಫಾರ್ಮ್ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಇದೀಗ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ರಾಷ್ಟ್ರೀಯ ಹಿತಾಸಕ್ತಿಗಳ ವಿರುದ್ಧ ಕೆಲಸ ಮಾಡುತ್ತಿರುವ ಸಾಮಾಜಿಕ ಮಾಧ್ಯಮ ತಾಣಗಳು ಮತ್ತು ಇನ್ಫ್ಲುಯೆನ್ಸರ್ ನಿಷೇಧಕ್ಕೆ ಸಂಸದೀಯ ಸಮಿತಿ ಆಗ್ರಹಿಸಿದೆ.ಈ ಕುರಿತು ಎರಡು ಪ್ರಮುಖ ಸಚಿವಾಲಯಗಳಿಂದ ಸಂಸದೀಯ ಸಮಿತಿಯು ವಿವರಣೆ ಕೋರಿದೆ.
ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೇತೃತ್ವದ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸ್ಥಾಯಿ ಸಮಿತಿಯು ದೇಶದಲ್ಲಿನ ಕೆಲವು ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳು ಮತ್ತು ಪ್ರಭಾವಿಗಳ ಚಟುವಟಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ವರದಿಗಳ ಪ್ರಕರಾ, ಈ ಘಟಕಗಳು ದೇಶದ ಹಿತಾಸಕ್ತಿಗಳ ವಿರುದ್ಧ ಕೆಲಸ ಮಾಡುತ್ತಿರುವಂತೆ ಕಂಡುಬರುತ್ತಿದೆ. ಇದು ಹಿಂಸಾಚಾರವನ್ನು ಪ್ರಚೋದಿಸುವ ಸಾಧ್ಯತೆಯಿದೆ ಎಂದು ಸಮಿತಿ ಅಭಿಪ್ರಾಯ ವ್ಯಕ್ತಪಡಿಸಿದೆ.
ಐಟಿ ಕಾಯ್ದೆ 2000 ರ ಅಡಿಯಲ್ಲಿ ಕ್ರಮಗಳನ್ನು ಕೈಗೊಳ್ಳಲು ಸೂಚನೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ನಿಯಮದಲ್ಲಿ ಕ್ರಮಕ್ಕೆ ಆಗ್ರಹಿಸಿದೆ.
ಐಟಿ ಕಾಯ್ದೆ 2000 ಮತ್ತು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು, 2021 ರ ಅಡಿಯಲ್ಲಿ ಭಾರತ ವಿರೋಧಿ ಸೋಶಿಯಲ್ ಮೀಡಿಯಾ ಹಾಗೂ ಇನ್ಫ್ಲುಯೆನ್ಸರ್ ವಿರುದ್ಧ ಕ್ರಮಕ್ಕೆ ನಿಷೇಧಿಸಲು ತೆಗೆದುಕೊಂಡ ಚಿಂತನಶೀಲ ಕ್ರಮದ ವಿವರಗಳನ್ನು” ಸಮಿತಿ ಕೋರಿದೆ. ಮೇ 8 ರೊಳಗೆ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ಎರಡೂ ಸಚಿವಾಲಯಗಳ ಕಾರ್ಯದರ್ಶಿಗಳಿಗೆ ಪತ್ರವನ್ನು ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪಹಲ್ಗಾಮ್ ದಾಳಿಯು ಆನ್ಲೈನ್ ವೇದಿಕೆಗಳ ಪರಿಶೀಲನೆಗೆ ಕಾರಣವಾಗಿದೆ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಯ ನಂತರ ಆನ್ಲೈನ್ ವೇದಿಕೆಗಳ ಪರಿಶೀಲನೆ ಹೆಚ್ಚಾದ ನಂತರ ಈ ಕ್ರಮ ಕೈಗೊಳ್ಳಲಾಗಿದೆ, ಅಲ್ಲಿ ಕನಿಷ್ಠ 26 ನಾಗರಿಕರು, ಅವರಲ್ಲಿ ಹೆಚ್ಚಿನವರು ಪ್ರವಾಸಿಗರು, ಭಯೋತ್ಪಾದಕರಿಂದ ಗುಂಡಿಕ್ಕಿ ಕೊಲ್ಲಲ್ಪಟ್ಟರು. ಈ ಹೇಯ ಕೃತ್ಯಕ್ಕೆ ಭಾರತ ಪಾಕಿಸ್ತಾನ ಸಂಬಂಧಿತ ಭಯೋತ್ಪಾದಕ ಗುಂಪುಗಳನ್ನು ದೂಷಿಸಿದೆ.
ದಾಳಿಯ ನಂತರ, ರಾಷ್ಟ್ರೀಯ ಭದ್ರತಾ ಹಿತಾಸಕ್ತಿಗಳಿಗೆ ಹಾನಿಕಾರಕವೆಂದು ಪರಿಗಣಿಸಲಾದ ವಿಷಯವನ್ನು ಹರಡುತ್ತಿದೆ ಎಂದು ಆರೋಪಿಸಿ ಹಲವಾರು ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳನ್ನು ವೇದಿಕೆಗಳಲ್ಲಿ ನಿರ್ಬಂಧಿಸಲಾಗಿದೆ.