Back To Top

 ಲಾಕ್ ಮಾಡಲಾದ ಕಾರಿನೊಳಗೆ ಉಸಿರುಗಟ್ಟಿ ಸಾವನ್ನಪ್ಪಿದ ನಾಲ್ವರು ಮಕ್ಕಳು

ಲಾಕ್ ಮಾಡಲಾದ ಕಾರಿನೊಳಗೆ ಉಸಿರುಗಟ್ಟಿ ಸಾವನ್ನಪ್ಪಿದ ನಾಲ್ವರು ಮಕ್ಕಳು

ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ಲಾಕ್ ಮಾಡಲಾದ ಕಾರಿನೊಳಗೆ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯ ವಿದ್ರಾವಕ ದುರಂತ ಸಂಭವಿಸಿದೆ.

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ಲಾಕ್ ಮಾಡಲಾದ ಕಾರಿನೊಳಗೆ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯ ವಿದ್ರಾವಕ ದುರಂತ ಸಂಭವಿಸಿದೆ. ವಿಜಯನಗರ ಕಂಟೋನ್ಮೆಂಟ್ ವ್ಯಾಪ್ತಿಯ ದ್ವಾರಪುಡಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.  ಪೊಲೀಸರ ಪ್ರಕಾರ, 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ನಾಲ್ವರು ಮಕ್ಕಳು ನಿಲ್ಲಿಸಿದ್ದ ಕಾರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಕಾರಿನ ಬಾಗಿಲುಗಳು ಲಾಕ್ ಆಗಿದ್ದರಿಂದ ಮಕ್ಕಳು ಒಳಗೆ ಸಿಲುಕಿಕೊಂಡಿದ್ದಾರೆ. ಬೆಳಿಗ್ಗೆಯಿಂದ ಮಕ್ಕಳು ಕಾಣದ ಕಾರಣ ಪೋಷಕರು ಹುಡುಕಾಟ ನಡೆಸಿದ ನಂತರ ಈ ಘಟನೆ ಬೆಳಕಿಗೆ ಬಂದಿದ್ದು. ಕಾರಿನಲ್ಲಿ ಮಕ್ಕಳ ಶವ ಪತ್ತೆಯಾಗಿದೆ. ಭಾನುವಾರ ಬೆಳಿಗ್ಗೆ 8 ವರ್ಷದ ಉದಯ್, 8 ವರ್ಷದ ಚಾರುಮತಿ, 6 ವರ್ಷದ ಚರಿಷ್ಮಾ ಮತ್ತು 6 ವರ್ಷದ ಮನಸ್ವಿ ಆಟವಾಡಲು ಹೊರಗೆ ಹೋಗಿದ್ದರು. ಈ ವೇಳೆ ನಾಲ್ವರು ಅಲ್ಲೇ ನಿಲ್ಲಿಸಿದ್ದ ಕಾರಿನಲ್ಲಿ ಆಟವಾಡಲು ಒಳಗೆ ಹೋಗಿದ್ದಾರೆ. ಈ ವೇಳೆ ಕಾರಿನ ಬಾಗಿಲುಗಳು ಲಾಕ್ ಆಗಿದ್ದು ಮಕ್ಕಳು ಒಳಗೆ ಸಿಲುಕಿ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ. ಕಳೆದ ನಾಲ್ಕು ತಿಂಗಳಲ್ಲಿ ಆಂದ್ರದಲ್ಲಿ ನಡೆದ ಎರಡನೇ ಘಟನೆ ಇದಾಗಿದ್ದು. ಏಪ್ರೀಲ್ ತಿಂಗಳಲ್ಲಿ ಆಂದ್ರದ ರಂಗಾರೆಡ್ಡಿ ಜಿಲ್ಲೆಯಲ್ಲಿ ಕಾರಿನಲ್ಲಿ ಲಾಕ್ ಆಗಿ ಇಬ್ಬರು ಬಾಲಕಿಯರು ಉಸಿರುಕಟ್ಟಿ ಸಾವನ್ನಪ್ಪಿದ್ದರು.

ಇದನ್ನು ಓದಿ:

https://infomindz.in/108-ambulence-nirvahane-sarkara/
Prev Post

ಭಾರತದ ವಿರುದ್ಧದ ದಾಳಿಗೆ ಪಾಕ್ ಗೆ  350 ಡ್ರೋನ್‌ ಕೊಟ್ಟ ಟರ್ಕಿ

Next Post

ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಗಾಳಿ, ಮಳೆ ಬೆಂಗಳೂರಲ್ಲಿ ಮಳೆಗೆ ಜನ…

post-bars

Leave a Comment

Related post