ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ದಂಪತಿ ಕಾಲಿಗೆ ಬಿದ್ದು ಕ್ಷಮೆ
ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾರೆ.
ಬೆಂಗಳೂರು: ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾರೆ. ಬಿಹಾರ ಮೂಲದ ಪನ್ಸೂರಿ ಎಂಬ ಮಹಿಳೆ ಬೆಂಗಳೂರಿನ ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ಮೇ 28ರಂದು ಆಟೋ ಚಾಲಕನಿಗೆ ಚಪ್ಪಲಿಂದ ಥಳಿಸಿದ ಘಟನೆ ನಡೆದಿತ್ತು. ಈ ಬಗ್ಗೆ ಆಟೋ ಚಾಲಕ ಲೋಕೇಶ್ ಬೆಳ್ಳಂದೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಂದು ಹಲ್ಲೆ ನಡೆಸಿದ ಮಹಿಳೆಯನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮಹಿಳೆ, ತಾನು ಪತಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಆಟೋ ಹಿಂಬದಿಯಿಂದ ಬಂದು ಬೈಕ್ ಗೆ ಡಿಕ್ಕಿಹೊಡೆದಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಆಟೋ ಚಾಲಕ ಗಲಾಟೆ ಮಾಡಿ ಹಲ್ಲೆಗೆ ಮುಂದಾಗಿದ್ದಾನೆ. ಇದರಿಂದ ಕೋಪಗೊಂಡು ತಾನು ಆತನಿಗೆ ಹೊಡೆದಿದ್ದೇನೆ ಎಂದು ಮಹಿಳೆ ಹೇಳಿಕೆ ನೀಡಿದ್ದರು. ಪೊಲೀಸರ ಸೂಚನೆಗೆ ಮೇರೆಗೆ ಭಾನುವಾರ ಠಾಣೆಗೆ ಬಂದ ದಂಪತಿಯನ್ನು ಪೊಲೀಸರು ವಿಚಾರಣೆ ನಡೆಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದರು. ವಿಚಾರಣೆಗೆ ಪೊಲೀಸ್ ಠಾಣೆಗೆ ಬಂದಿದ್ದ ದಂಪತಿ ಆಟೋ ಚಾಲಕನಿಗೆ ಕ್ಷಮೆ ಕೇಳಿದ್ದಾರೆ. ತನ್ನನ್ನು ಕ್ಷಮಿಸುವಂತೆ ಕಾಲಿಗೆ ಬಿದ್ದು ಬೇಡಿಕೊಂಡಿದ್ದಾರೆ. ಎಲ್ಲಾ ಕನ್ನಡಿಗರಿಗೂ ಕ್ಷಮೆ ಕೇಳುತ್ತೇನೆ ಇನ್ನೊಮ್ಮೆ ಹೀಗೆ ಮಾಡಲ್ಲ ಎಂದು ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇದನ್ನು ಓದಿ: