Back To Top

 ಕಾಂತಾರ ಚಿತ್ರದ ಕಲಾವಿದ ಹೃದಯಾಘಾತದಿಂದ ಸಾವು
June 13, 2025

ಕಾಂತಾರ ಚಿತ್ರದ ಕಲಾವಿದ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಕಾಂತಾರ ಚಿತ್ರಕ್ಕಾಗಿ ತೀರ್ಥಹಳ್ಳಿಗೆ ಆಗಮಿಸಿ ಆಗುಂಬೆ ಬಳಿ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು.
ಆದರೆ ನಿನ್ನೆ ರಾತ್ರಿ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸಲಾಯಿತಾದರೂ ಆತ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ವಿಜು ಅವರ ಮೃತದೇಹವನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಅವರ ಕುಟುಂಬಸ್ಥರು ಕೇರಳದಿಂದ ಆಗಮಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ತಿಂಗಳು ಕಾಂತಾರ ಚಿತ್ರದ ಟೆಕ್ನಿಷಿಯನ್ ಕಪಿಲ್‌ ಎಂಬುವವರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಕೇರಳ ಮೂಲದ ಕಲಾವಿದ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಬಳಿಕ ಕಾಂತಾರಾ ಸಿನಿಮಾದಲ್ಲಿ ನಟನೆ ಮಾಡಿದ್ದ ಹಾಸ್ಯ ಕಲಾವಿದ ರಾಕೇಶ್‌ ಪೂಜಾರಿ ಅವರು ಕೂಡಾ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮದುವೆ ಕಾರ್ಯಕ್ರಮವೊಂದರಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು.
ಇದಕ್ಕೂ ಮುನ್ನ ಕಾಂತಾರ ಸಹ ಕಲಾವಿದರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನ ಪಲ್ಟಿಯಾಗಿ ಕೆಲವರಿಗೆ ಗಾಯಗಳಾಗಿತ್ತು. ಇನ್ನು ಕಾಂತಾರ ಮೊದಲ ಪಾರ್ಟ್‌ನಲ್ಲಿ ಗುರುವ ಪಾತ್ರದಲ್ಲಿ ನಟಿಸಿದ್ದ ಸ್ವರಾಜ್‌ ಶೆಟ್ಟಿ ಅವರ ʼನೆತ್ತರೆಕೆರೆʼ ಸಿನಿಮಾ ಸೆಟ್ಟಿಗೆ ಬೆಂಕಿ ಹೊತ್ತಿಕೊಂಡಿತ್ತು. ಕಾಂತಾರ ಸಿನಿಮಾಗೆ ಈ ರೀತಿಯ ಸಾಲು ಸಾಲು ಅವಘಡಗಳು ಆತಂಕವನ್ನು ಮೂಡಿಸಿದೆ.

Prev Post

ಹುಡುಗಿಯರ ಮಿಸ್‌ ಯೂಸ್ ಮಾಡೋ ಜಾಲದ ಮಾಹಿತಿ ಬಿಚ್ಚಿಟ್ಟು ಯುವಕ ಆತ್ಮಹತ್ಯೆs

Next Post

ಬರ್ತ್‌ಡೇ ಪಾರ್ಟಿಯಲ್ಲಿ ವಿದೇಶಿ ಮದ್ಯ, ಗಾಂಜಾ ಸಮೇತ ಸಿಕ್ಕಿಬಿದ್ದ ತೆಲುಗು ಗಾಯಕಿ ಮಂಗ್ಲಿ

post-bars

Leave a Comment

Related post