Back To Top

 ಮಾಧ್ಯಮ ಪ್ರಕಟಣೆಜನವರಿ 13ರಂದು ಮುಖ್ಯಮಂತ್ರಿಗಳಿಂದ ಮನೆಗೊಂದು ಗ್ರಂಥಾಲಯ ಯೋಜನೆ ಉದ್ಘಾಟನೆ ಹಾಗೂ ಕುಮಾರವ್ಯಾಸಭಾರತ ಕೃತಿ ಬಿಡುಗಡೆ
January 12, 2025

ಮಾಧ್ಯಮ ಪ್ರಕಟಣೆಜನವರಿ 13ರಂದು ಮುಖ್ಯಮಂತ್ರಿಗಳಿಂದ ಮನೆಗೊಂದು ಗ್ರಂಥಾಲಯ ಯೋಜನೆ ಉದ್ಘಾಟನೆ ಹಾಗೂ ಕುಮಾರವ್ಯಾಸಭಾರತ ಕೃತಿ ಬಿಡುಗಡೆ

ಕನ್ನಡ ಪುಸ್ತಕ ಪ್ರಾಧಿಕಾರವು ಮನೆಗೊಂದು ಗ್ರಂಥಾಲಯ ಯೋಜನೆಯ ಉದ್ಘಾಟನೆ ಹಾಗೂ ‘ಕುಮಾರವ್ಯಾಸ ಭಾರತ ಎಂಬ ಕರ್ಣಾಟಭಾರತಕಥಾಮಂಜರಿ’ ಕೃತಿ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ:13.01.2025ರಂದು ಸನ್ಮಾನ್ಯ ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣ’ದಲ್ಲಿ ಬೆಳಿಗ್ಗೆ 11.00ಗಂಟೆಗೆ ಏರ್ಪಡಿಸಿದೆ. ಸನ್ಮಾನ್ಯ ಮುಖ್ಯಮಂತ್ರಿಗಳು ಈ ಯೋಜನೆಯ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಮಾನ್ಯ ಮುಖ್ಯಮಂತ್ರಿಯವರ ಮನೆಯಲ್ಲಿ ಮೊದಲ ಗ್ರಂಥಾಲಯವನ್ನು ಉದ್ಘಾಟಿಸಲಿದ್ದಾರೆ. ಗ್ರಂಥಾಲಯ ಫಲಕದ ಅನಾವರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ನೆರವೇರಿಸಲಿದ್ದಾರೆ.
ಕನ್ನಡ ಪುಸ್ತಕ ಪ್ರಾಧಿಕಾರದಿಂದ ಮುದ್ರಣವಾಗಿರುವ ‘ಕುಮಾರವ್ಯಾಸ ಭಾರತ ಎಂಬ ಕರ್ಣಾಟಭಾರತಕಥಾಮಂಜರಿ’ ಕೃತಿಯ ಬಿಡುಗಡೆಯನ್ನು ಇದೇ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕೃತಿಯನ್ನು ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಶಿವರಾಜ ಎಸ್. ತಂಗಡಗಿ ಅವರು ಬಿಡುಗಡೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ. ಎನ್. ಮಂಜುಳ ಭಾ.ಆ.ಸೇ. ಹಾಗೂ ನಿರ್ದೇಶಕರಾದ ಡಾ. ಕೆ. ಧರಣೀದೇವಿ ಮಾಲಗತ್ತಿ ಭಾ.ಪೋ.ಸೇ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಮಾನ್ಯ ಅಧ್ಯಕ್ಷರಾದ ಡಾ. ಮಾನಸ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ದಯವಿಟ್ಟು ಈ ವಿಷಯವನ್ನು ತಮ್ಮ ಪತ್ರಿಕೆಯಲ್ಲಿ ರಾಜ್ಯಮಟ್ಟದ ಸುದ್ಧಿಯನ್ನಾಗಿ ಪ್ರಕಟಿಸಬೇಕಾಗಿ ಕೋರಿದೆ.

(ಕೆ.ಬಿ. ಕಿರಣ್ ಸಿಂಗ್)
ಆಡಳಿತಾಧಿಕಾರಿ

Prev Post

ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ!!

Next Post

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ; 2024 ರಲ್ಲಿ ದಾಖಲೆಯ 40…

post-bars

Leave a Comment

Related post