ಒಡಿಶಾ- ಛತ್ತೀಸ್ಗಡ ಗಡಿಯಲ್ಲಿ ಭದ್ರತಾ ಸಿಬ್ಬಂದಿಗಳಿಂದ 12 ನಕ್ಸಲರ ಎನ್ಕೌಂಟರ್
ಛತ್ತೀಸ್ಗಢ: ರಾಯ್ಪುರದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸೋಮವಾರ ಮುಂಜಾನೆ, ನಡೆದ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳಾ ನಕ್ಸಲೈಟ್ಗಳು ಹತರಾಗಿದ್ದು, ಒಬ್ಬ ಕೋಬ್ರಾ ಜವಾನ ಗಾಯಗೊಂಡಿದ್ದರು.
ಒಡಿಶಾದ ನುವಾಪಾದ ಜಿಲ್ಲೆಯ ಗಡಿಯಿಂದ ಕೇವಲ 5 ಕಿ.ಮೀ ದೂರದಲ್ಲಿರುವ ಛತ್ತೀಸ್ಗಢದ ಕುಲಾರಿಘಾಟ್ ಮೀಸಲು ಅರಣ್ಯದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಜನವರಿ 19 ರ ರಾತ್ರಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಎನ್ಕೌಂಟರ್ ಸ್ಥಳದಿಂದ ಸ್ವಯಂ-ಲೋಡಿಂಗ್ ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಐಇಡಿಗಳ ದೊಡ್ಡ ಸಂಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ನಕ್ಸಲರ ವಿರುದ್ಧದ ಈ ಕಾರ್ಯಾಚರಣೆಯಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ), ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್), ಛತ್ತೀಸ್ಗಢದ ಕೋಬ್ರಾ ಮತ್ತು ಒಡಿಶಾದ ವಿಶೇಷ ಕಾರ್ಯಾಚರಣೆ ಗುಂಪು (ಎಸ್ಒಜಿ) ಯ ಭದ್ರತಾ ಸಿಬ್ಬಂದಿಯ ಜಂಟಿ ತಂಡ ತೊಡಗಿದೆ.
ಜನವರಿ 9 ರಂದು ನಡೆದ ಎನ್ಕೌಂಟರ್ನಲ್ಲಿ ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ನಕ್ಸಲರು ಬಲಿಯಾಗಿದ್ದರು. ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲೈಟ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಎನ್ಕೌಂಟರ್ ನಡೆಯಿತು ಎಂದು ಪೊಲೀಸರು ತಿಳಿಸಿದ್ದರು. ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆ ಮತ್ತು ಕೋಬ್ರಾ(ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ – ಸಿಆರ್ಪಿಎಫ್ನ ಗಣ್ಯ ಘಟಕ)ಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.