Back To Top

 76ನೇ ಗಣರಾಜ್ಯೋತ್ಸವದ ಸಂಭ್ರಮ; ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಗೆಹಲೋತ್‌
January 26, 2025

76ನೇ ಗಣರಾಜ್ಯೋತ್ಸವದ ಸಂಭ್ರಮ; ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಗೆಹಲೋತ್‌

ಬೆಂಗಳೂರು: ರಾಜ್ಯದಲ್ಲಿ 76 ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ ಧ್ವಜಾರೋಹಣ ನೆರವೇರಿಸಿದರು. ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.
ನಾಡಿನ ಜನತೆಗೆ 76 ನೇ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದರು. ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ರಾಜ್ಯಪಾಲರು ಐದು ಗ್ಯಾರಂಟಿ ಕಲ್ಯಾಣ ಯೋಜನೆಗಳು ಯಶಸ್ವಿಯಾಗಿದ್ದು ದೇಶದ ಗಮನ ಸೆಳೆದಿವೆ ಎಂದರು. ಈ ಯೋಜನೆಗಳಿಂದ ಆರ್ಥಿಕ ಬಿಕ್ಕಟ್ಟು ಉಂಟಾಗಬಹುದು, ಅಭಿವೃದ್ಧಿ ಕುಂಠಿತವಾಗಬಹುದು ಎಂಬ ಭವಿಷ್ಯ ಸುಳ್ಳಾಗಿದೆ. ಕರ್ನಾಟಕ ರಾಜ್ಯವು ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ನ್ಯಾಯ ಎರಡನ್ನು ನಿಭಾಯಿಸುತ್ತಾ ದೇಶದಲ್ಲೇ ಅತ್ಯುತ್ತಮ ಅಭಿವೃದ್ಧಿ ಸಾಧಿಸಿದ ರಾಜ್ಯಗಳ ಪೈಕಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಲ್ಲಿ ಆಗಸ್ಟ್ 2023ರಿಂದ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2000 ದರದಲ್ಲಿ ಒಟ್ಟು 35,180.20 ಕೋಟಿ ರೂ ನೆರವು ನೀಡಲಾಗಿದೆ. ಗೃಹಜ್ಯೋತಿಯಲ್ಲಿ 1.62 ಕೋಟಿ ಜನರಿಗೆ ಪ್ರಯೋಜನ ಸಿಕ್ಕಿದೆ. ಶಕ್ತಿ ಯೋಜನೆಯಲ್ಲಿ 373.27 ಕೋಟಿ ಟ್ರಿಪ್ ಲಾಭ ಪಡೆಯಲಾಗಿದ್ದು,ಇದಕ್ಕೆ 9051 ಕೋಟಿ ರೂ ಹಣ ವೆಚ್ಚ ಮಾಡಲಾಗಿದೆ. ಯುವನಿಧಿ 1,24,176 ಜನ ಅರ್ಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ. ಅನ್ನಭಾಗ್ಯದ 4,48,12,382 ಫಲಾನುಭವಿಗಳಿಗೆ ಡಿಬಿಟಿ ಮೂಲಕ 9775.51 ಕೋಟಿ ರೂ ವರ್ಗಾವಣೆ ಮಾಡಲಾಗಿದೆ. ಈ ವರ್ಷ 13% ನಷ್ಟು ಹಣಕಾಸು ಬೆಳವಣಿಗೆ ಸಾಧಿಸಿದೆ ಎಂದ ರಾಜ್ಯಪಾಲರು ತಮ್ಮ ಭಾಷಣದಲ್ಲಿ ವಿವರಿಸಿದರು.

Prev Post

ಮಣಿಪುರದ ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲ ಹಿಂಪಡೆದ ಜೆಡಿ(ಯು)

Next Post

ಹೊಸಪೇಟೆಯಲ್ಲಿ ಧ್ವಜಾರೋಹಣ ವೇಳೆ ಹಗ್ಗ ತುಂಡಾಗಿ ಕೆಳಗೆ ಬಿದ್ದ ಬೃಹತ್‌ ರಾಷ್ಟ್ರ ಧ್ವಜ!!?ಬಾಗಲಕೋಟೆಯಲ್ಲಿ…

post-bars

Leave a Comment

Related post