ʼಹ್ಯಾಟ್ರಿಕ್ʼ ಗೆಲುವಿನತ್ತ ಮುನ್ನುಗಿದ್ದ ಕೇಜ್ರಿವಾಲ್ಗೆ ಸೋಲು?
ನವದೆಹಲಿ: ಬಹು ನಿರೀಕ್ಷಿತ ದೆಹಲಿ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು,ಎರಡು ಸುತ್ತಿನ ಎಣಿಕೆಯಲ್ಲೂ ಆಮ್ ಆದ್ಮಿ(AAP) ಭಾರೀ ಹಿನ್ನೆಡೆಯನ್ನು ಸಾಧಿಸಿದೆ. ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಮೊದಲ ಸುತ್ತಿನ ಮತ ಎಣಿಕೆಯಿಂದಲೂ ಭಾರೀ ಹಿನ್ನೆಡೆಯಲ್ಲಿದ್ದಾರೆ. ಹ್ಯಾಟ್ರಿಕ್ ಗೆಲುವು ಸಾಧಿಸುವ ಮತ್ತು ಮುಖ್ಯಮಂತ್ರಿ ಗದ್ದುಗೆ ಏರುವ ಕನಸು ಕಾಣುತ್ತಿದ್ದ ಕೇಜ್ರಿವಾಲ್ಗೆ ಮುಖಭಂಗವಾಗುತ್ತಿದೆ. ನವದೆಹಲಿ ಕ್ಷೇತ್ರದಿಂದ ಮೂರು ಬಾರಿ ಗೆದ್ದು ವಿಜಯದ ನಗೆ ಬೀರಿದ್ದ ಕೇಜ್ರಿವಾಲ್ ಎರಡು ಸಾವಿರ ಮತಗಳಿಂದ ಹಿಂದಿದ್ದಾರೆ. 42 ಕ್ಷೇತ್ರಗಳಲ್ಲಿ ಮುನ್ನೆಡೆ ಸಾಧಿಸಿರುವ ಬಿಜೆಪಿ ಸ್ಪಷ್ಟ ಬಹುಮತ ಪಡೆಯವ ಸಾಧ್ಯತೆಯಿದೆ.
ಸದ್ಯದ ಮತ ಎಣಿಕೆಯ ಪ್ರಕಾರ 44 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನೆಡೆ ಸಾಧಿಸಿದ್ದು ಸ್ಪಷ್ಟ ಬಹುಮತದತ್ತ ಸಾಗುತ್ತಿದೆ. ಎಎಪಿ 25, ಕಾಂಗ್ರೆಸ್ ಕೇವಲ ಒಂದು ಕ್ಷೇತ್ರದಲ್ಲಿ ಮುನ್ನೆಡೆ ಸಾಧಿಸಿದೆ. ಇತ್ತ ದೆಹಲಿಯ ಹಾಲಿ ಮುಖ್ಯಮಂತ್ರಿ ಅತಿಶಿ ಮಾರ್ಲೇನಾ ತಮ್ಮ ಕ್ಷೇತ್ರ ಉಳಿಸಿಕೊಳ್ಳುವಲ್ಲಿ ವಿಫಲರಾಗುತ್ತಿದ್ದು, ಅವರ ವಿರುದ್ಧ ಕಣದಲ್ಲಿರುವ ಬಿಜೆಪಿ ಅಭ್ಯರ್ಥಿ ರಮೇಶ್ ಬಿದುರಿ ಮುನ್ನೆಡೆಯಲ್ಲಿದ್ದಾರೆ.