ಮಂಡೆಯಲ್ಲಿ ಕೂದಲಿಲ್ಲವೆಂದು ಪತ್ನಿ ಕಾಟ: ನೊಂದ ಗಂಡ ಸೂಸೈಡ್
ಗಂಡನ ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿ ಕಿರುಕುಳ ನೀಡಿದ್ದಾಳೆ. ಇದರಿಂದ ಮನನೊಂದು ಗಂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಗುಡಿಗಾಲದಲ್ಲಿ ಈ ಒಂದು ಘಟನೆ ನಡೆದಿದೆ.ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪರಶಿವಮೂರ್ತಿ (30) ಎಂದು ತಿಳಿದು ಬಂದಿದೆ.
ಚಾಮರಾಜನಗರ: ಪತ್ನಿಯರ ಕಾಟಕ್ಕೆ ಗಂಡಂದಿರು ಜೀವ ಕಳೆದುಕೊಳ್ಳುತ್ತಿರುವ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಮತ್ತೆ ಅಂತದ್ದೇ ಘಟನೆ ವರದಿಯಾಗಿದೆ. ತಲೆಯಲ್ಲಿ ಕೂದಲಿಲ್ಲ ಎನ್ನುವ ಕಾರಣಕ್ಕೆ ಪತ್ನಿ ಪತಿಯನ್ನು ಹೀಯಾಳಿಸಿ ಕಿರುಕುಳ ನೀಡಿದ್ದಾಳೆ. ಇದರಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಗಂಡನ ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿ ಕಿರುಕುಳ ನೀಡಿದ್ದಾಳೆ. ಇದರಿಂದ ಮನನೊಂದು ಗಂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಗುಡಿಗಾಲದಲ್ಲಿ ಈ ಒಂದು ಘಟನೆ ನಡೆದಿದೆ.ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪರಶಿವಮೂರ್ತಿ (30) ಎಂದು ತಿಳಿದು ಬಂದಿದೆ.
ಎರಡು ವರ್ಷದ ಹಿಂದೆ ಕಳಕಿಪುರದ ಮಮತಾ ಜೊತೆಗೆ ಮದುವೆ ಆಗಿತ್ತು. ಮದುವೆ ಹಳಿಕ ಪರಶಿವಮೂರ್ತಿ ತಲೆಕೂದಲು ಉದುರಿತ್ತು. ಹೊರಗೆ ಹೋದರೆ ನನಗೆ ನಾಚಿಕೆ ಆಗುತ್ತದೆ ಎಲ್ಲರೂ ಅಪಹಾಸ್ಯ ಮಾಡುತ್ತಾರೆ. ನನ್ನ ಗಂಡ ಎಂದು ಹೇಳೋಕೆ ಮುಜುಗರ ಆಗುತ್ತದೆ ಎಂದು ಕಿರುಕುಳ ನೀಡಿದ್ದಳು.
ಇದೀಗ ಪರಶಿವಮೂರ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದಕ್ಕೂ ಮೊದಲು ಪತ್ನಿ ಮಮತಾ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಎಂದು ಸುಳ್ಳು ಕೇಸ್ ಕೂಡ ಹಾಕಿದ್ದಳು.
ಈ ಕೇಸ್ ನಲ್ಲಿ ಪತಿಯನ್ನು ಒಮ್ಮೆ ಜೈಲಿಗೆ ಕೂಡ ಕಳಿಸಿದ್ದಾಳೆ. ಸುಳ್ಳು ಕೇಸ್ ದಾಖಲಿಸಿ ಪತಿಯನ್ನು ಜೈಲಿಗೆ ಕಳಿಸಿದ್ದು, ಅಲ್ಲದೇ ತಾಳಿ ತೆಗೆದು ವಾಟ್ಸಾಪ್ ಸ್ಟೇಟಸ್ ಹಾಕುತ್ತಿದ್ದಳು. ಇದೇ ವಿಚಾರಕ್ಕೆ ಪದೇ ಪದೇ ಗಲಾಟೆ ಆಗುತ್ತಿತ್ತು ಎನ್ನಲಾಗಿದೆ.
ಇದನ್ನು ಓದಿ: