Back To Top

 ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆ
April 8, 2025

ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆ

ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನನಗೆ ಸೇವೆ ನೀಡುವ ಹರಕೆ ಹೇಳಿಕೋ, ಐದು ತಿಂಗಳ ಗಡುವಲ್ಲಿ ಒಳ್ಳೆದು ಮಾಡುತ್ತೇನೆ’ ಎಂದು ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆಯನ್ನು ನೀಡಿದೆ.

ಬೆಂಗಳೂರು: ‘ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನನಗೆ ಸೇವೆ ನೀಡುವ ಹರಕೆ ಹೇಳಿಕೋ, ಐದು ತಿಂಗಳ ಗಡುವಲ್ಲಿ ಒಳ್ಳೆದು ಮಾಡುತ್ತೇನೆ’ ಎಂದು ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆಯನ್ನು ನೀಡಿದೆ.
ಮಂಗಳೂರಿನ ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ವಾರ್ಷಿಕ ಉತ್ಸವದಲ್ಲಿ ಕುಟುಂಬ ಸಮೇತರಾಗಿ ಭಾಗಿಯಾದ ಕಾಂತಾರ ಸಿನಿಮಾ ನಟ ರಿಷಬ್ ಶೆಟ್ಟಿ, ಪಂಜುರ್ಲಿ ನೇಮಕ್ಕೆ ಬೇಡಿಕೊಂಡಿದ್ದಾರೆ. ಇದೇ ವೇಳೆ ಬೆಳಗಿನ ಜಾವದವರೆಗೂ ದೈವದ ಉತ್ಸವದಲ್ಲಿ ಭಾಗಿಯಾಗಿದ್ದಾರೆ. ಉತ್ಸವದ ಕೊನೆಯಲ್ಲಿ ವಾರಾಹಿ ಪಂಜುರ್ಲಿ ದೈವದಲ್ಲಿ ರಿಷಬ್ ಶೆಟ್ಟಿ ಕಷ್ಟವನ್ನು ಹೇಳಿಕೊಂಡಿದ್ದಾರೆ.
ರಿಷಬ್ ಶೆಟ್ಟಿ ಕಷ್ಟವನ್ನು ಆಲಿಸಿದ ಪಂಜುರ್ಲಿ ದೈವದಿಂದ ‘ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ’ ಎಂದು ಶತ್ರುಗಳ ಕಾಟದ ಬಗ್ಗೆ ದೈವವು ಎಚ್ಚರಿಕೆ ನೀಡಿದೆ. ಮುಂದುವರೆದು, ‘ನನಗೆ ಸೇವೆ ನೀಡುವ ಹರಕೆ ಹೇಳಿಕೋ, ಮುಂದಿನ 5 ತಿಂಗಳ ಗಡುವಲ್ಲಿ ಒಳ್ಳೆದು ಮಾಡುತ್ತೇನೆ’ ಎಂದು ದೈವದಿಂದ ಅಭಯವನ್ನು ನಿಡಲಾಗಿದೆ. ಆಗ ರಿಷಬ್ ಶೆಟ್ಟಿ ದಂಪತಿ ವಾರಾಹಿ ಪಂಜುರ್ಲಿ ದೈವದ ಅಭಯದಿಂದ ಮನಸ್ಸಿಗೆ ಸ್ವಲ್ಪ ನೆಮ್ಮದಿ ತಂದುಕೊಂಡಿದ್ದಾರೆ. ನಟ ರಿಷಬ್ ಶೆಟ್ಟಿ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಿಂದಲೇ ದೈವದ ಉತ್ಸವಕ್ಕೆ ಹೋಗಿದ್ದರು.

ಇದನ್ನು ಓದಿ:

https://infomindz.in/kippi-keerthige-madve-fix-aithu/
Prev Post

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗೆ ಮುತ್ತಿಕ್ಕಿದ ಯುವಕ

Next Post

ಸಬ್ ಇನ್ಸ್ ಪೆಕ್ಟರ್ ಮಗನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ

post-bars

Leave a Comment

Related post