Back To Top

 ಹಣಕ್ಕೋಸ್ಕರ ಹೆತ್ತ ತಾಯಿಯನ್ನೇ ರಾಡ್‌ನಿಂದ ತಲೆಗೆ ಹೊಡೆದು ಕೊಲೆ

ಹಣಕ್ಕೋಸ್ಕರ ಹೆತ್ತ ತಾಯಿಯನ್ನೇ ರಾಡ್‌ನಿಂದ ತಲೆಗೆ ಹೊಡೆದು ಕೊಲೆ

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ಪಾಪಿ ಮಗನೊಬ್ಬ ಹಣಕ್ಕೋಸ್ಕರ ಹೆತ್ತ ತಾಯಿಯನ್ನೇ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.
ಈ ಘಟನೆ ಬಾಗಲಕುಂಟೆಯ ಮುನೇಶ್ವರ ನಗರದಲ್ಲಿ ತಡರಾತ್ರಿ ನಡೆದಿದೆ. ಆರೋಪಿ ಮಹೇಂದ್ರ ಸಿಂಗ್ ತನ್ನ ತಾಯಿ ಶಾಂತಾಬಾಯಿಯನ್ನು ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದು ಕೊಂದಿದ್ದಾನೆ.ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ಪಾಪಿ ಮಗನೊಬ್ಬ ಹಣಕ್ಕೋಸ್ಕರ ಹೆತ್ತ ತಾಯಿಯನ್ನೇ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.
ಈ ಘಟನೆ ಬಾಗಲಕುಂಟೆಯ ಮುನೇಶ್ವರ ನಗರದಲ್ಲಿ ತಡರಾತ್ರಿ ನಡೆದಿದೆ. ಆರೋಪಿ ಮಹೇಂದ್ರ ಸಿಂಗ್ ತನ್ನ ತಾಯಿ ಶಾಂತಾಬಾಯಿಯನ್ನು ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದು ಕೊಂದಿದ್ದಾನೆ.ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.
ವರದಿಗಳ ಪ್ರಕಾರ ಮಹೇಂದ್ರ ಸಿಂಗ್ ಶಾಂತಾಬಾಯಿ ಅವರಿಗೆ ಪ್ರತಿ ದಿನ ಹಣಕ್ಕಾಗಿ ಪೀಡಿಸುತ್ತಿದ್ದ. ನಿನ್ನೆ ರಾತ್ರಿ ಕೂಡಾ ಹಣ ಕೊಡುವಂತೆ ಕಿರುಕುಳ ನೀಡಿದ್ದಾನೆ. ನಂತರ ಜಗಳ ತೀವ್ರವಾಗಿದ್ದು, ಮಹೇಂದ್ರ ಸಿಂಗ್‌ ತಾಯಿತ ತಲೆಗೆ ಕಬ್ಬಿಣದ ರಾಡ್‌ನಿಂದ ತಾಯಿಯ ತಲೆಗೆ ಬಲವಾಗಿ ಹೊಡೆದು ಸ್ಥಳದಿಂದ ಪರಾರಿಯಾಗಿದ್ದಾನೆ.
ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇದೀಗ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Prev Post

ಹಾಲಿನ ಕಳ್ಳರ ಹಾವಳಿ: ಬೈಕ್ನಲ್ಲಿ ಬಂದು ಹಾಲು ಕಳವು

Next Post

ವಿಶ್ವವಿಖ್ಯಾತ ಕರಗಕ್ಕೆ ಕ್ಷಣಗಣನೆ: ಇಲಾಖೆಯಿಂದ ಕರಗಕ್ಕೆ ಹಣ ಬಿಡುಗಡೆ ಮಾಡಿಲ್ಲ, ಆರೋಪ

post-bars

Leave a Comment

Related post