ದಾಳಿ ನಡೆಸಿದವರನ್ನು ಸ್ವಾತಂತ್ರ್ಯ ಹೋರಾಟಗಾರರು ಎಂದ ಪಾಕ್ ಉಪ ಪ್ರಧಾನಿ
ಪಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ ಪಾಕ್ ಉಗ್ರರ ವಿರುದ್ಧ ವಿಶ್ವದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದರ ನಡುವೆ ಪಾಕ್ ಉಪ ಪ್ರಧಾನಿ ಆಘಾತಕಾರಿ ಹೇಳಿಕೆಯೊಂದನ್ನು ನೀಡಿದ್ದು, ದಾಳಿ ನಡೆಸಿದವರನ್ನು ಸ್ವಾತಂತ್ರ್ಯ ಹೋರಾಟಗಾರರು ಎಂದು ಕರೆದಿದ್ದಾರೆ.
ಇಸ್ಲಾಮಾಬಾದ್ : ಪಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ ಪಾಕ್ ಉಗ್ರರ ವಿರುದ್ಧ ವಿಶ್ವದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದರ ನಡುವೆ ಪಾಕ್ ಉಪ ಪ್ರಧಾನಿ ಆಘಾತಕಾರಿ ಹೇಳಿಕೆಯೊಂದನ್ನು ನೀಡಿದ್ದು, ದಾಳಿ ನಡೆಸಿದವರನ್ನು ಸ್ವಾತಂತ್ರ್ಯ ಹೋರಾಟಗಾರರು ಎಂದು ಕರೆದಿದ್ದಾರೆ.
ಉಗ್ರರ ದಾಳಿಯ ಬಗ್ಗೆ ಮಾತನಾಡಿದ ಪಾಕ್ ನ ಉಪಪ್ರಧಾನಿ ಹಾಗೂ ವಿದೇಶಾಂಗ ಇಲಾಖೆ ಸಚಿವನೂ ಆಗಿರುವ ಇಶಾಕ್ ದಾರ್, ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ದಾಳಿ ನಡೆಸಿದವರು ಸ್ವಾತಂತ್ರ್ಯ ಹೋರಾಟಗಾರರಾಗಿರಬಹುದು ಎಂದು ಆಘಾತಕಾರಿ ಹೇಳಿಕೆಯನ್ನು ನೀಡಿದ್ದಾರೆ.
ಸಿಂಧೂ ನದಿ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ವಿಷಯವನ್ನು ಪ್ರಸ್ತಾಪಿಸಿದ ದಾರ್, ಪಾಕಿಸ್ತಾನದಲ್ಲಿ 240 ಮಿಲಿಯನ್ ಜನರಿಗೆ ನೀರು ಬೇಕು. ಭಾರತ ಅದನ್ನು ತಡೆಯಲು ಸಾಧ್ಯವಿಲ್ಲ. ಇದು ಯುದ್ಧದ ಕೃತ್ಯಕ್ಕೆ ಸಮಾನ. ಯಾವುದೇ ಅಮಾನತು ಅಥವಾ ಅತಿಕ್ರಮಣವನ್ನು ಸ್ವೀಕರಿಸಲಾಗುವುದಿಲ್ಲ ಎಂದು ಹೇಳಿದರು.
ಭಾರತ ಪಾಕಿಸ್ತಾನಕ್ಕೆ ಬೆದರಿಕೆ ಹಾಕಿದರೆ ಅಥವಾ ದಾಳಿ ಮಾಡಿದರೆ ನಾವು ಕೂಡ ತಕ್ಕ ಉತ್ತರ ಕೊಟ್ಟೇ ಕೊಡುತ್ತೇವೆ. ನಮ್ಮಲ್ಲಿ ಕೂಡ ಸುಸಜ್ಜಿತ ಶಸ್ತ್ರಾಸ್ತ್ರಗಳಿವೆ, ಭಾರತ ಬೇಕಂತಲೇ ಪಾಕ್ ಅನ್ನು ಕೆಣಕುತ್ತಿದೆ ಎಂದು ಪಾಕ್ ಉಪ ಪ್ರಧಾನಿ ಇಶಾಕ್ ದಾರ್ ಹೇಳಿದರು.
ಇನ್ನು ಭಾರತದಿಂದ ನಮ್ಮ ನಾಗರಿಕರಿಗೆ ಹಾನಿಯಾದರೆ, ಭಾರತೀಯ ನಾಗರಿಕರು ಸಹ ಸುರಕ್ಷಿತವಾಗಿ ಉಳಿಯುವುದಿಲ್ಲ. ಇದು ಪ್ರತೀಕಾರದ ಕ್ರಮವಾಗಿರುತ್ತದೆ ಎಂದು ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಹೇಳಿದ್ದಾರೆ ̤
ಇದನ್ನು ಓದಿ: