Back To Top

 ದಾಳಿಯ ಸಂತ್ರಸ್ತರಿಗೆ ನ್ಯಾಯ ಸಿಗುತ್ತದೆ:  ಪ್ರಧಾನಿ ಮೋದಿ
April 27, 2025

ದಾಳಿಯ ಸಂತ್ರಸ್ತರಿಗೆ ನ್ಯಾಯ ಸಿಗುತ್ತದೆ:  ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದರು. ತಮ್ಮ ಕಾರ್ಯಕ್ರಮದ ಆರಂಭದಲ್ಲಿಯೇ ಪ್ರಧಾನಿ ಮೋದಿ ಪಹಲ್ಗಾಮ್ ದಾಳಿಯ ಬಗ್ಗೆ ಪ್ರಸ್ತಾಪಿಸಿದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದರು. ತಮ್ಮ ಕಾರ್ಯಕ್ರಮದ ಆರಂಭದಲ್ಲಿಯೇ ಪ್ರಧಾನಿ ಮೋದಿ ಪಹಲ್ಗಾಮ್ ದಾಳಿಯ ಬಗ್ಗೆ ಪ್ರಸ್ತಾಪಿಸಿದರು. ಪಹಲ್ಗಾಮ್‌ನಲ್ಲಿ ನಡೆದ ಈ ದಾಳಿಯಿಂದ ಹೃದಯದಲ್ಲಿ ಆಳವಾದ ನೋವು ಇದೆ ಎಂದು ಅವರು ಹೇಳಿದರು.ನಮ್ಮ ದೇಶದ ಜನರಲ್ಲಿ ಇರುವ ಕೋಪವು ಇಡೀ ಜಗತ್ತಿನಲ್ಲಿಯೂ ಇದೆ ಎಂದು ಪ್ರಧಾನಿ ಹೇಳಿದರು. ಈ ಘೋರ ಭಯೋತ್ಪಾದಕ ದಾಳಿಯನ್ನು ಎಲ್ಲರೂ ಬಲವಾಗಿ ಖಂಡಿಸಿದರು. ದಾಳಿ ವಿರುದ್ಧ ಭಾರತೀಯರ ರಕ್ತ ಕುದಿಯುತ್ತಿದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಇಡೀ ಜಗತ್ತು 140 ಕೋಟಿ ಭಾರತೀಯರೊಂದಿಗೆ ನಿಂತಿದೆ. ದಾಳಿಯ ಸಂತ್ರಸ್ತರಿಗೆ ನ್ಯಾಯ ಸಿಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

Prev Post

ಪಾಕಿಸ್ತಾನ ಪ್ರಜೆಗಳು ಏ.27ರೊಳಗೆ ಭಾರತ ಬಿಡಲೇಬೇಕು: ಪಾಕ್ ಹಿಂದೂ ನಿರಾಶ್ರಿತರಿಗೆ ಸಂಕಷ್ಟ

Next Post

ಸಿಎಂಗೆ  ಆತ್ಮಹತ್ಯೆಯ ಬೆದರಿಕೆ ಹಾಕಿದ ಕೋವೀಡ್ ಸಂತ್ರಸ್ತರು

post-bars

Leave a Comment

Related post