ಕಮಲ್ ಹಾಸನ್ ನ ಥಗ್ ಲೈಫ್ ಸಿನಿಮಾ ಬಿಡುಗಡೆ ಆದ್ರೆ ಥಿಯೇಟರ್ ಗೆ ಬೆಂಕಿ ಹಚ್ಚುತ್ತೇವೆ ಎಂದ ಕನ್ನಡಿಗರು
ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳುವ ಮೂಲಕ ನಟ ಕಮಲ್ ಹಾಸನ್ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವುದು ಗೊತ್ತೇ ಇದೆ. ಇದನ್ನು ಖಂಡಿಸಿ ಕನ್ನಡಿಗರೆಲ್ಲರೂ ಆಕ್ರೋಶ ಹೊರಹಾಕುತ್ತಿದ್ದಾರೆ.
ಬೆಂಗಳೂರು: ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳುವ ಮೂಲಕ ನಟ ಕಮಲ್ ಹಾಸನ್ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವುದು ಗೊತ್ತೇ ಇದೆ. ಇದನ್ನು ಖಂಡಿಸಿ ಕನ್ನಡಿಗರೆಲ್ಲರೂ ಆಕ್ರೋಶ ಹೊರಹಾಕುತ್ತಿದ್ದಾರೆ. ಅಲ್ಲದೆ, ಕ್ಷಮೆ ಕೋರುವಂತೆ ಆಗ್ರಹಿಸಿದ್ದಾರೆ.ಆದರೆ, ಕಮಲ್ ಹಾಸನ್ ಮಾತ್ರ ನಾನು ಕ್ಷಮೆ ಕೋರುವುದಿಲ್ಲ ಎನ್ನುವ ಮೂಲಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದೀಗ ಕಮಲ್ ಹಾಸನ್ ವಿರುದ್ಧ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಕಿಡಿಕಾರಿದ್ದಾರೆ.
‘ಕನ್ನಡಕ್ಕೆ ಅವಮಾನ ಮಾಡಿದ್ದಕ್ಕೆ ಕಮಲ್ ಹಾಸನ್ ಕ್ಷಮೆಯಾಚಿಸಬೇಕು. ಕ್ಷಮೆ ಕೇಳದಿದ್ದರೆ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲಿ ರಿಲೀಸ್ ಮಾಡಿದ್ರೇ ಸಿನಿಮಾ ಥಿಯೇಟರ್ಗೆ ಬೆಂಕಿ ಹಚ್ಚುತ್ತೇವೆ’ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಾಣಗೌಡ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ನಾರಾಯಾಣಗೌಡ, ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ಸಿನಿಮಾ ರಿಲೀಸ್ ಆಗಲ್ಲ. ರಾಜ್ಯದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್ ಮಾಡುವುದಕ್ಕೆ ಬಿಡಲ್ಲ. ಒಂದು ವೇಳೆ ಕ್ಷಮೆ ಕೇಳದೇ ಸಿನಿಮಾ ಬಿಡುಗಡೆ ಮಾಡಿದ್ರೆ ಥಿಯೇಟರ್ಗೆ ಬೆಂಕಿ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಏನಿದು ವಿವಾದ?
ನಟ ಕಮಲ್ ಹಾಸನ್ ಕನ್ನಡ ತಮಿಳಿನಿಂದ ಹುಟ್ಟಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ವಿರುದ್ಧ ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ. ಈಗಾಗಲೇ ಫಿಲ್ಮಂ ಚೇಂಬರ್ ಕ್ಷಮೆಯಾಚನೆಗೆ ಡೆಡ್ ಲೈನ್ ನೀಡಿದೆ. ಆದರೂ ನಾನು ಕ್ಷಮೆ ಯಾಚಿಸೋದಿಲ್ಲ ಎಂದು ಕಮಲ್ ಹಾಸನ್ ಸೊಕ್ಕಿನ ಹೇಳಿಕೆ ನೀಡುತ್ತಿದ್ದಾರೆ.
ಇದನ್ನು ಓದಿ: