ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿಗೆ ವಿಶೇಷ ಪ್ರಾರ್ಥನೆ
ಕರ್ನಾಟಕದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಿರುವ ಫ್ಯಾನ್ ಫಾಲೋಯಿಂಗನ್ನು ಪದಗಳಲ್ಲಿ ಬಣ್ಣಿಸಲಾಗದು.
ಮಂಡ್ಯ: ಕರ್ನಾಟಕದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಿರುವ ಫ್ಯಾನ್ ಫಾಲೋಯಿಂಗನ್ನು ಪದಗಳಲ್ಲಿ ಬಣ್ಣಿಸಲಾಗದು. ಒಬ್ಬೊಬ್ಬರದು ಒಂದೊಂದು ಬಗೆಯ ಅಭಿಮಾನ, ಪ್ರೀತಿ. ಇವತ್ತು ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) 18ನೇ ಸೀಸನ್ನಿನ ಫೈನಲ್ ಪಂದ್ಯ ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಂಡ್ಯ ನಗರದಲ್ಲಿ ಆರ್ಸಿಬಿ ಅಭಿಮಾನಿಗಳ ಗುಂಪೊಂದು ಶಕ್ತಿದೇವತೆ ಕಾಳಿಕಾಂಬ ದೇವಸ್ಥಾನದಲ್ಲಿ ಅರ್ಸಿಬಿ ತಂಡದ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿತು ಮತ್ತು ಒಬ್ಬ ಅಭಿಮಾನಿ ಉರುಳು ಸೇವೆ ಸಲ್ಲಿಸಿ, ವಿರಾಟ್ ಕೊಹ್ಲಿ ತಂಡದ ಯಶಕ್ಕಾಗಿ ಪ್ರಾರ್ಥಿಸಿದರು.