
ಪುರಿ ಜಗನ್ನಾಥ ರಥಯಾತ್ರೆ ವೇಳೆ ನೂಕುನುಗ್ಗಲು: ಕಾಲ್ತುಳಿತಕ್ಕೆ ಮೂವರು ಬಲಿ: Puri Jagannata Ratha Yathra kannada Update
Orissa ಒರಿಸ್ಸಾ: ಪುರಿಯಲ್ಲಿ ಜಗನ್ನಾಥನ ರಥಯಾತ್ರೆ ಬಹಳ ಅದ್ದೂರಿಯಾಗಿ ನಡೆಯುತ್ತಿದೆ. ಈ ನಡುವೆ ಶ್ರೀ ಗುಂಡಿಚಾ ದೇವಸ್ಥಾನದ ಬಳಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. Puri Jagannata Ratha Yathra kannada Update
ಬಲಭದ್ರನ ತಾಳಧ್ವಜ ರಥ ಎಳೆಯುವ ವೇಳೆ ವಿಳಂಭವಾಗಿತ್ತು. ಇದರಿಂದ ರಥಯಾತ್ರೆ ಮಾರ್ಗದ ತಿರುವಿನಲ್ಲಿ ಬಹಳಷ್ಟು ತೊಂದ್ರೆ ಉಂಟಾಗಿತ್ತು. ಈ ವೇಳೆ ರಥ ನಿಂತಿದ್ದರಿಂದ ಕಾಲ್ತುಳಿತ ಸಂಭವಿಸಿತು ಎಂದು ಹೇಳಲಾಗುತ್ತಿದೆ.
ಇಂದು ಬೆಳಗಿನ ಜಾವ 4:30 ರ ಸುಮಾರಿಗೆ ಶ್ರೀ ಗುಂಡಿಚಾ ದೇವಸ್ಥಾನದ ಮುಂದೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾಗ ಈ ಘಟನೆ ಸಂಭವಿಸಿದೆ.

ಒಂಬತ್ತು ದಿನಗಳ ಕಾಲ ನಡೆಯುವ ರಥಯಾತ್ರೆಯ ಸಮಯದಲ್ಲಿ ಪುರಿಯ ಗುಂಡಿಚಾ ದೇವಸ್ಥಾನದ ಬಳಿ ಸಂಭವಿಸಿದ ದುರಂತ ಕಾಲ್ತುಳಿತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಭಕ್ತರ ಬೃಹತ್ ಸಮೂಹದ ನಡುವೆ ಈ ಘಟನೆ ಸಂಭವಿಸಿದೆ.
ಕಾಲ್ತುಳಿತಕ್ಕೆ ಮುಂಚೆಯೇ, ಆರೋಗ್ಯ ಅಧಿಕಾರಿಗಳು ಜನಸಂದಣಿಗೆ ಸಂಬಂಧಿಸಿದ ಗಮನಾರ್ಹ ಆರೋಗ್ಯ ಸಮಸ್ಯೆಗಳನ್ನು ವರದಿ ಮಾಡಿದ್ದರು, ನೂರಾರು ಭಕ್ತರಿಗೆ ಆಯಾಸ ಮತ್ತು ಒತ್ತಡದಿಂದಾಗಿ ವೈದ್ಯಕೀಯ ನೆರವು ಅಗತ್ಯವಾಗಿತ್ತು. ಮೃತರನ್ನು ಪ್ರೇಮಕಾಂತ ಮೊಹಂತಿ (80), ಬಸಂತಿ ಸಾಹೂ (36) ಮತ್ತು ಪ್ರಭಾತಿ ದಾಸ್ (42) ಎಂದು ಗುರುತಿಸಲಾಗಿದೆ ಎಂದು ಪುರಿ ಜಿಲ್ಲಾ ಕೇಂದ್ರ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
ಲಕ್ಷಾಂತರ ಭಕ್ತರು ಸೇರುವ ಸಲುವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆದರೂ ಕಾಲ್ತುಳಿತ ಸಂಭವಿಸಿದೆ. ರಥಯಾತ್ರೆ ಎರಡನೇ ದಿನ 600 ರಷ್ಟು ಜನ ಅಸ್ವಸ್ಥರಾಗಿದ್ದರು.ಜಗನ್ನಾಥ ದೇವರು ಮತ್ತು ಅವರ ಅಣ್ಣ ಬಲಭದ್ರ ಮತ್ತು ತಂಗಿ ದೇವಿ ಸುಭದ್ರಾ ದೇವಿಯ ರಥಯಾತ್ರೆಯ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗಿದ್ದರಿಂದ ಕಾಲ್ತುಳಿತ ಸಂಭವಿಸಿದ್ದು, 600ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ಭಕ್ತರನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಅಂಬುಲೆನ್ಸ್ಗಳು ರಥಯಾತ್ರೆ ಸ್ಥಳಕ್ಕೆ ತಲುಪಿವೆ. ಸಂತ್ರಸ್ತರನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರಿಗೂ ಅಗತ್ಯ ವೈದ್ಯಕೀಯ ನೆರವು ನೀಡಲಾಗಿದೆ.
ಜಗನ್ನಾಥನ ಮೆರವಣಿಗೆಯಲ್ಲಿ ದಿಕ್ಕಾಪಾಲಾಗಿ ಓಡಿದ ಆನೆಗಳು: ಹಲವರಿಗೆ ಸಣ್ಣಪುಟ್ಟ ಗಾಯ: puri jagannatha ratha yathra
ಜಗನ್ನಾಥ ರಥಯಾತ್ರೆ ಪ್ರಾರಂಭ: ಲಕ್ಷಾಂತರ ಭಕ್ತರು ಭಾಗವಹಿಸುವ ವಿಶ್ವಪ್ರಸಿದ್ಧ ಉತ್ಸವ: puri jagannath ratha yathre