ಶಿಕ್ಷಕ ಹುದ್ದೆ ಬಡ್ತಿಗೆ ಅರ್ಹತಾ ಪರೀಕ್ಷೆ (TET) ಕಡ್ಡಾಯ
ನಿವೃತ್ತಿ ಹೊಂದಲು 5 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆಯಲ್ಲಿರುವವರು ಎರಡು ವರ್ಷಗಳ ಒಳಗೆ TET ಗೆ ಅರ್ಹತೆ ಪಡೆಯಬೇಕು.
ನವದೆಹಲಿ: ರಾಜ್ಯದಲ್ಲಿ ಅತಿಥಿ ಶಿಕ್ಷಕರು ವಿವಿಧ ಬೇಡಿಕೆಗೆ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬೆನ್ನಲ್ಲೇ ಸರ್ಕಾರಿ ಶಿಕ್ಷಕ ಹುದ್ದೆಗೆ ನೇಮಕಗೊಳ್ಳಲು ಮತ್ತು ಸೇವೆಯಲ್ಲಿರುವ ಶಿಕ್ಷಕರು ಬಡ್ತಿ ಪಡೆಯಲು ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕಡ್ಡಾಯವಾಗಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ತಮ್ಮ ತೀರ್ಪಿನಲ್ಲಿ, ನಿವೃತ್ತಿ ಹೊಂದಲು 5 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆಯಲ್ಲಿರುವವರು ಎರಡು ವರ್ಷಗಳ ಒಳಗೆ TET ಗೆ ಅರ್ಹತೆ ಪಡೆಯಬೇಕು.
ಇಲ್ಲದಿದ್ದರೆ, ಅವರು ರಾಜೀನಾಮೆ ನೀಡಬಹುದು ಅಥವಾ ಸರ್ಕಾರದ ಕೊನೆಯ ಪ್ರಯೋಜನಗಳನ್ನು ಪಡೆದುಕೊಂಡು ಕಡ್ಡಾಯ ನಿವೃತ್ತಿಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದೆ.
ನಿವೃತ್ತರಾಗಲು ಐದು ವರ್ಷಗಳಿಗಿಂತ ಕಡಿಮೆ ಅವಧಿ ಹೊಂದಿದ್ದರೆ ಪರಿಹಾರ ನೀಡಬೇಕು ಎಂದು ಕೂಡ ಸುಪ್ರೀಂ ಕೋರ್ಟ್ ಹೇಳಿದೆ. ಅಂಥವರು ಟಿಇಟಿ ಪರೀಕ್ಷೆ ತೆಗೆದುಕೊಳ್ಳಬೇಕಿಲ್ಲ. ಆದರೆ ಅವರು ಬಡ್ತಿಗೆ ಅರ್ಹರಾಗಿರುವುದಿಲ್ಲ ಎಂದು ಹೇಳಿದೆ.
ಮೇಲ್ಮನವಿ ಸಲ್ಲಿಸಿದವರಲ್ಲಿ ಒಬ್ಬರಾದ ಅಂಜುಮನ್ ಇಶಾತ್-ಎ-ತಲೀಮ್ ಟ್ರಸ್ಟ್ (ಮಾನ್ಯತೆ ಪಡೆದ ಅಲ್ಪಸಂಖ್ಯಾತ ಶಿಕ್ಷಣ ಸಮಾಜ) ಸಹ ಈ ಪ್ರಕರಣದಲ್ಲಿ ಮಹಾರಾಷ್ಟ್ರ ರಾಜ್ಯದ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ರಾಜ್ಯವು ಅಲ್ಪಸಂಖ್ಯಾತ ಸಂಸ್ಥೆಗಳಿಗೆ ಟಿಇಟಿಯನ್ನು ಕಡ್ಡಾಯಗೊಳಿಸಬಹುದೇ ಮತ್ತು ಅದು ಅವರ ಹಕ್ಕುಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬ ಪ್ರಶ್ನೆಯನ್ನು ಉನ್ನತ ನ್ಯಾಯಾಲಯವು ದೊಡ್ಡ ಪೀಠಕ್ಕೆ ಉಲ್ಲೇಖಿಸಿತು ಎಂದು ತಿಳಿದುಬಂದಿದೆ.
ಇದನ್ನು ಓದಿ: